Shri Siddharoodha Swamiji Math Trust Committee

Hubballi

www.srisiddharoodhaswamiji.in

Events Of Current Months

ಲಕ್ಷದೀಪೋತ್ಸವ
20-11-2025 ಛಟ್ಟಿ ಅಮವಾಸ್ಯೆ, ಶ್ರೀಮಠದಲ್ಲಿ ಲಕ್ಷದೀಪೋತ್ಸವ

Daily News
ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ವಿಶ್ವನಾಥ ಸಜ್ಜನರ ಐ.ಪಿ.ಎಸ್. ಇವರ ಭೆಟ್ಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-01.12.2025 ರಂದು ಹೈದ್ರಾಬಾದ ಪೊಲೀಸ್ ಆಯುಕ್ತರಾದ ಸನ್ಮಾನ್ಯ ಶ್ರೀ ವಿಶ್ವನಾಥ ಸಜ್ಜನವರ, ಐ.ಪಿ.ಎಸ್., ಇವರು ಶ್ರೀಮಠಕ್ಕೆ ಕುಟುಂಬ ಸಮೇತರಾಗಿ ಭೆಟ್ಟಿ ಕೊಟ್ಟು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮಾನ್ಯ ಶ್ರೀ ವಿಶ್ವನಾಥ ಸಜ್ಜನರ ಇವರು ಶ್ರೀಮಠಕ್ಕೆ ೧೦೦ ಸೌಂದರೀಕರಣದ ಗಿಡಗಳ ಕುಂಡಲಿಗಳನ್ನು ದೇಣಿಗೆಯಾಗಿ ನೀಡಿರುತ್ತಾರೆ. ಸದರಿ ಕುಂಡಲಿಗಳಿಗೆ ನೀರು ಹಾಕುವ ಮುಖಾಂತರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀಮಠದ ಮ್ಯಾನೇಜರ್‌ರಾದ ಶ್ರೀ ಈರಣ್ಣ ಸೋ. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು

ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ನಡೆದ ಲಕ್ಷ ದೀಪೋತ್ಸವ

ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ದಿನಾಂಕ: 20.11.2025 ರಂದು ಸಾಯಂಕಾಲ 06-30 ಘಂಟೆಗೆ ಶ್ರೀಮಠದ ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು, ಧಾರವಾಡ ಜಿಲ್ಲಾ, ಧಾರವಾಡದ ಸನ್ಮಾನ್ಯ ಶ್ರೀಮತಿ ಬಿ.ಎಸ್.ಭಾರತಿ ಹಾಗೂ ಇವರ ಪತಿಯಾದ ಶ್ರೀ ರಾಜಶೇಖರ, ಧಾರವಾಡ ಜಿಲ್ಲಾ ನ್ಯಾಯಾಧೀಶರಾದ ಶ್ರೀಮತಿ ವೀಣಾ ನಾಯಕ, ಇವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಈ ಮಹತ್ವಪೂರ್ಣ ಕಾರ್ಯಕ್ರಮದಲ್ಲ್ಲಿ ಭಾಗವಹಿಸಿದವರೆಲ್ಲರಿಗೂ ಶುಭಮಂಗಲವಾಗಲೆAದು ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಚೇರಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ ವಹಿಸಿದ್ದರು, ಧರ್ಮದರ್ಶಿಗಳಾದ ಶ್ರೀ ಶಾಮಾನಂದ ಬಾ. ಪೂಜೇರಿ ಇವರು ಎಲ್ಲರನ್ನು ಸ್ವಾಗತಿಸಿದರು, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ ಇವರು ಕಾರ್ಯಕ್ರಮವನ್ನು ನಿರೂಪಿಸಿದರು, ಪ್ರಾರ್ಥನೆಯನ್ನು ಶ್ರೀ ಸದಾನಂದ ಬೆಂಡಿಗೇರಿ ಇವರು ನೆರವೇರಿಸಿದರು. . ಈ ಸಂದರ್ಭದಲ್ಲಿ ವೈಸ್ ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡ್ಕೆ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಧರ್ಮದರ್ಶಿಗಳಾದ ಶ್ರೀ ಮಂಜುನಾಥ ಎಸ್. ಮುನವಳ್ಳಿ, ಶ್ರೀ ವಿ.ವಿ.ಮಲ್ಲಾಪೂರ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀಮತಿ ಸರ್ವಮಂಗಳಾ ಎನ್. ಪಾಠಕ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀ ಕೆ.ಎಲ್.ಪಾಟೀಲ, ಶ್ರೀ ವಿ.ಡಿ.ಕಾಮರಡ್ಡಿ, ಶ್ರೀ ಸಿದ್ದನಗೌಡ ಪಿ. ಪಾಟೀಲ, ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ, ಶ್ರೀ ವಸಂತ ವಾಯ್. ಸಾಲಗಟ್ಟಿ, ಮಾಜಿ ಚೇರ್‌ಮನ್ನರಾದ ಶ್ರೀ ಮಹೇಂದ್ರ ಸಿಂಘಿ, ಮಾಜಿ ಗೌರವ ಕಾರ್ಯದರ್ಶಿಗಳಾದ ಶ್ರೀ ರಂಗಾ ಬದ್ದಿ, ಶ್ರೀ ಎಸ್.ಆಯ್.ಕೋಳಕೂರ, ಮಾಜಿ ಧರ್ಮದರ್ಶಿಗಳಾದ ಶ್ರೀ ಮಹೇಶ ಹನಗೋಡಿ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ದೀಪಾ ಗೌರಿ ಹಾಗೂ ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ತುಪ್ಪದ ಹಾಗೂ ಸಿಬ್ಬಂದಿವರ್ಗದವರು ಮತ್ತು ಅನೇಕ ಭಕ್ತರು ಉಪಸ್ಥಿತರಿದ್ದರು. ದೀಪೋತ್ಸವದಲ್ಲಿ ಅತೀ ಹೆಚ್ಚು ಉತ್ಸುಕತೆಯಿಂದ ಸೇವೆ ಸಲ್ಲಿಸಿದ ಭಕ್ತರಿಗೆ, ಸೇವಕರಿಗೆ, ಪಾಠಶಾಲಾ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಮರಗೋಳ ವರ್ತಕರಿಗೆ ಗೌರವ ಸಮರ್ಪಣೆ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಪ್ರತಿ ನಿತ್ಯ ನಡೆಯುವ ಅನ್ನಸಂತರ್ಪಣೆಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಮರಗೋಳ ಇಲ್ಲಿಯ ವರ್ತಕರು ಆಲೂಗಡ್ಡೆ ಹಾಗೂ ಉಳ್ಳಾಗಡ್ಡೆಯನ್ನು ಉಚಿತವಾಗಿ ಶ್ರೀಮಠಕ್ಕೆ ದೇಣಿಗೆಯನ್ನು ಸಲ್ಲಿಸುತ್ತಾ ಬರುತ್ತಿದ್ದಾರೆ. ಇಂತಹ ದಾನಿಗಳನ್ನು ಶ್ರೀಮಠಕ್ಕೆ ಆವ್ಹಾನಿಸಿ ದಿನಾಂಕ:-16.11.2025 ರಂದು ಗೌರವಿಸಿ ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ ಕಮೀಟಿಯ ಧರ್ಮದರ್ಶಿಗಳಾದ ಶ್ರೀ ಉದಯಕುಮಾರ ಡಿ. ನಾಯ್ಕ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಸಿದ್ದನಗೌಡ ಪಿ. ಪಾಟೀಲ ಮತ್ತು ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ಡಾ|| ಅರವಿಂದ ಜತ್ತಿ ಇವರ ಭೆಟ್ಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ದಿನಾಂಕ:-15.11.2025 ರಂದು ಬಸವ ಸಮಿತಿಯ ಹಿರಿಯ ಅದ್ಯಕ್ಷರಾದ ಸನ್ಮಾನ್ಯ ಶ್ರೀ ಡಾ|| ಅರವಿಂದ ಜತ್ತಿ ಇವರು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಉಭಯ ಶ್ರೀಗಳವರ ದರ್ಶನಾಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ಟ್ರಸ್ಟ್ ಕಮೀಟಿ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಮತ್ತು ಭಕ್ತರಾದ ಶ್ರೀ ಲೋಕೇಶ ಕೊರವಿ, ಶ್ರೀ ಜೆ.ಎಲ್.ವಿಶ್ವನಾಥ, ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಶ್ರೀಮನ್ನ ನಿಜಗುಣಶಿವಯೋಗಿಗಳ ಜಯಂತಿ ಕಾರ್ಯಕ್ರಮ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಶ್ರೀಮನ್ನ ನಿಜಗುಣಶಿವಯೋಗಿಗಳ ಜಯಂತಿ ಕಾರ್ಯಕ್ರಮಗಳು ದಿನಾಂಕ: 11.11.2025 ರಿಂದ 13.11.2025 ರವರೆಗೆ ನಡೆಯುತ್ತವೆ. ಈ ಕಾರ್ಯಕ್ರಮದ ಅಂಗವಾಗಿ ದಿನಾಂಕ:-11.11.2025 ರಂದು ಮುಂಜಾನೆ 10-00 ಘಂಟೆಯಿಂದ ಶ್ರೀಮಠದ ಕೈಲಾಸ ಮಂಟಪದಲ್ಲಿ ಪೂಜ್ಯ ಮಹಾತ್ಮರಿಂದ ಪ್ರವಚನ ನೆರವೇರಿತು, ಇಂದಿನ ಪ್ರವಚನ ವಿಷಯವಾದ “ನೆನೆವುದನುದಿನದುದಯ ಕಾಲದೆಚ್ಚರಿಕೆಯೊಳು” ಸಾನಿಧ್ಯವನ್ನು ವಹಿಸಿದ ಪರಮ ಪೂಜ್ಯಶ್ರೀ ನಿಜಗುಣ ಮಹಾಸ್ವಾಮಿಗಳು, ಬ್ರಹ್ಮವಿದ್ಯಾಶ್ರಮ, ಹಳಕಟ್ಟಿ ಇವರು ಮಾತನಾಡಿ ಸೂರ್ಯ ಉದಯ ಸಮಯದಲ್ಲಿ ಗುರು ಸ್ಮರಣೆಯಿಂದ ಪ್ರಾರಂಭಿಸಿದ ಪರಮಾತ್ಮನ ಸ್ಮರಣೆ ಮಾಡಿದ ಫಲ ಲಭಿಸುತ್ತದೆ. ಮನುಷ್ಯರಾದ ನಾವು ಬೇರೆಯವರ ವಿಚಾರವನ್ನು ಮಾಡದೆ ನನ್ನ ಬಗ್ಗೆ ಸ್ಮರಣೆಯನ್ನು ಮಾಡಬೇಕು ನನ್ನ ಬಗ್ಗೆ ತಿಳಿದುಕೊಂಡು ಧರ್ಮದೆಡೆಗೆ ಸಾಗಬೇಕು ಎಂದು ನುಡಿದರು. ಅಧ್ಯಕ್ಷತೆಯನ್ನು ಪರಮ ಪೂಜ್ಯಶ್ರೀ ಅತ್ಯಾನಂದ ಮಹಾಸ್ವಾಮಿಗಳು, ಶಾಮಾನಂದ ಆಶ್ರಮ ಗೋಕಾಕ ಇವರು ಮಾತನಾಡುತ್ತಾ ಗುರು ಸೇವೆಯಿಂದ ಜೀವನ್ಮುಕ್ತಿ ಪ್ರಾಪ್ತವಾಗುತ್ತದೆ ಎಂದು ನುಡಿದರು. ತತ್ವೋಪದೇಶಕ ಮಹಾತ್ಮರುಗಳಾದ : ಪರಮ ಪೂಜ್ಯಶ್ರೀ ನಾಗೇಶ್ವರಭಾರತಿ ಸ್ವಾಮಿಗಳು, ಸಿದ್ಧಾರೂಢಮಠ, ಉಪ್ಪಾರಟ್ಟಿ. ಪರಮ ಪೂಜ್ಯಶ್ರೀ ಕೃಷ್ಣಾನಂದ ಸ್ವಾಮಿಗಳು, ಯಕ್ಕನಳ್ಳಿ ಪರಮ ಪೂಜ್ಯಶ್ರೀ ಶಿವಾನಂದ ಸ್ವಾಮಿಗಳು, ಬೆನಕನಕೊಪ್ಪ. ಪರಮ ಪೂಜ್ಯಶ್ರೀ ಶಾಂತಾನAದಸ್ವಾಮಿಗಳು, ಹುಬ್ಬಳ್ಳಿ. ಪರಮ ಪೂಜ್ಯಶ್ರೀ ಸಿದ್ಧಾನಂದಭಾರತಿ ಮಹಾಸ್ವಾಮಿಗಳು, ಹುಬ್ಬಳ್ಳಿ. ಪರಮ ಪೂಜ್ಯಶ್ರೀ ಬಸವಾನಂದ ಮಹಾಸ್ವಾಮಿಗಳು, ಶರಣಪ್ಪನವರಮಠ, ಹುಬ್ಬಳ್ಳಿ. ಪರಮ ಪೂಜ್ಯ ಸಚ್ಚಿದಾನಂದ ಮಹಾಸ್ವಾಮಿಗಳು, ಶಾಂತಾಶ್ರಮ ಹುಬ್ಬಳ್ಳಿ ಉಪಸ್ಥಿತರಿದ್ದರು. ಶ್ರೀಮಠದ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ ಇವರು ಪ್ರಾಸ್ತಾವಿಕ ಮತ್ತು ಸ್ವಾಗತ ನೆರವೇರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀ ಸಿದ್ದನಗೌಡ ಪಿ. ಪಾಟೀಲ, ಡಾ|| ಗೋವಿಂದ ಗು. ಮಣ್ಣೂರ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಭಕ್ತರು ಉಪಸ್ಥಿತರಿದ್ದರು

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಹೈಕೋರ್ಟ್ ನ್ಯಾಯಾಧೀಶರ ಭೆಟ್ಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ದಿನಾಂಕ:-09.11.2025 ರಂದು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾದ ಸನ್ಮಾನ್ಯ ಶ್ರೀ ದಿನೇಶಕುಮಾರ ಸಿಂಗ್ ಇವರು ಶ್ರೀಮಠಕ್ಕೆ ಆಗಮಿಸಿ ಉಭಯ ಶ್ರೀಗಳವರ ದರ್ಶನಾಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ನ್ಯಾಯಮೂರ್ತಿಗಳಿಗೆ ಸನ್ಮಾನ್ಯ ಶ್ರೀಮತಿ ಬಿ.ಎಸ್.ಭಾರತಿ, ಮಾನ್ಯ ಮುಖ್ಯ ಅಡಳಿತಾಧಿಕಾರಿಗಳು, ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್ ಕಮೀಟಿ, ಹುಬ್ಬಳ್ಳಿ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಧಾರವಾಡ ಜಿಲ್ಲಾ, ಧಾರವಾಡ ಇವರು ಶ್ರೀಮಠದ ಟ್ರಸ್ಟ್ ಕಮೀಟಿ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಮತ್ತು ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಕರ್ನಾಟಕ ವಿಧಾನಸಭೆಯ ಉಪಸಭಾಪತಿಗಳು ಮತ್ತು ಸದಸ್ಯರುಗಳ ಭೆಟ್ಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ದಿನಾಂಕ:-06.11.2025 ರಂದು ಕರ್ನಾಟಕ ವಿಧಾನಸಭೆಯ ಉಪಸಭಾಪತಿಗಳಾದ ಸನ್ಮಾನ್ಯ ಶ್ರೀ ರುದ್ರಪ್ಪ ಲಮಾಣಿ ಮತ್ತು ವಿಧಾನ ಸಭಾ ಸದಸ್ಯರುಗಳಾದÀ ಸನ್ಮಾನ್ಯ ಶ್ರೀ ಸುರೇಶಕುಮಾರ, ಎ.ಮಂಜು, ಪ್ರಿಯಾಕೃಷ್ಣಾ, ಎಸ್.ಮುನಿರಾಜು, ಎಸ್.ಟಿ. ಸೋಮಶೇಖರ, ಸಿ.ಎನ್.ಬಾಲಕೃಷ್ಣ, ಡಾ|| ಅವಿನಾಶ ಜಾದವ, ಹೆಚ್.ಡಿ.ತಮ್ಮಯ್ಯ, ಶ್ರೀ ಮಹೇಶ ಟೆಂಗಿನಕಾಯಿ, ಆನಂದ ಕೆ.ಎಸ್., ಮತ್ತು ಧಾರವಾಡ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯಪ್ರಭು ಜೆ.ಆರ್.ಜೆ, ಆಯ್.ಎ.ಎಸ್. ಅಧಿಕಾರಿಯಾದ ಪ್ರಭುಲಿಂಗ ಕವಳಿಕಟ್ಟಿ, ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ ಘಾಳಿ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಸಂತೋಷಕುಮಾರ ಬಿರಾದಾರ ಇವರುಗಳು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಉಭಯ ಶ್ರೀಗಳವರ ದರ್ಶನಾಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ಟ್ರಸ್ಟ್ ಕಮೀಟಿ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಬೆಳಗಾವಿ, ಧರ್ಮದರ್ಶಿಗಳಾದ ಡಾ|| ಗೋವಿಂದ ಮಣ್ಣೂರು, ಶ್ರೀ ಉದಯಕುಮಾರ ಡಿ.ನಾಯ್ಕ ಮತ್ತು ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು

ಶ್ರೀಮಠದಲ್ಲಿ ಗೋಪಾಳಕಾಳ ನಿಮಿತ್ಯ ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ದಿನಾಂಕ:-30.10.2025 ರಿಂದ 05.11.2025 ರವರೆಗೆ ಭಾಗವತ ಸಪ್ತಾಹ ಕಾರ್ಯಕ್ರಮ ನೆರವೇರಿತು, ದಿನಾಂಕ:-05.11.2025 ರಂದು ಸಾಯಂಕಾಲ 07-30 ಘಂಟೆಗೆ ಗೋಪಾಳಕಾಳ ನಿಮಿತ್ಯ ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮವನ್ನು ಶ್ರೀಮಠದ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ ಇವರು ನೆರವೇರಿಸಿದರು. ಶ್ರೀಮಠದ ಸಂಸ್ಕೃತ ಪಾಠಶಾಲೆಯಲ್ಲಿ ಭಾಗವತ್ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಪ್ರತಿ ನಿತ್ಯ ಮುಂಜಾನೆ 9-00 ಘಂಟೆಯಿAದ 12-00 ಘಂಟೆಯವರೆಗೆ ಹಾಗೂ ಮದ್ಯಾಹ್ನ 3-00 ಘಂಟೆಯಿಂದ 05-00 ಘಂಟೆಯವರೆಗೆ ಭಾಗವತ ಶಾಸ್ತçವನ್ನು ನಡೆಸಿಕೊಟ್ಟ ಶ್ರೀ ಶಿವಾನಂದ ಜೋಶಿಯವರು ಹಾಗೂ ದಾಸೋಹ ಸೇವೆ ನೆರವೇರಿಸಿದ ಶ್ರೀಮತಿ ನೀಲಮ್ಮ ಗೌಳಿ ಮತ್ತು ಡಂಬರಮತ್ತೂರ ಗ್ರಾಮದ ದಾನಿಗಳನ್ನು ಶ್ರೀಮಠದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಮಠದ ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಡಾ|| ಗೋವಿಂದ ಗು. ಮಣ್ಣೂರ ಹಾಗೂ ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ತುಪ್ಪದ ಹಾಗೂ ಸಿಬ್ಬಂದಿವರ್ಗದವರು ಮತ್ತು ಅನೇಕ ಭಕ್ತರು ಉಪಸ್ಥಿತರಿದ್ದರು.




  VIEW ALL