Shri Siddharoodha Swamiji Math Trust Committee

Hubballi

www.srisiddharoodhaswamiji.in

Events Of Current Months

ಭಗವಚ್ಚಿಂತನ
Date:-21.07.2025 ಶ್ರೀಮಠದಲ್ಲಿ ಭಗವಚ್ಚಿಂತನ ಸಾಧನ ಶಿಬಿರ ಮುಕ್ತಾಯ
ಗುರುಪೂರ್ಣಿಮೆ
Date:-10.07.2025 ಕಡ್ಲಿಗಡಬ ಹುಣ್ಣಿಮೆ, ಗುರುಪೂರ್ಣಿಮೆ ಶ್ರೀಮಠದಲ್ಲಿ ಮೊಸರು ಗಡಿಗೆ ಒಡೆಯುವುದು.

Daily News
ಶ್ರೀ ಸಿದ್ಧಾರೂಢ ಮಹಾಸ್ವಾಮಿಯವರ ಮಠದಲ್ಲಿ ನೆರವೇರಿದ ಸಂಗೀತ ಸಂದ್ಯಾ ಕಾರ್ಯಕ್ರಮ.

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ದಿನಾಂಕ:-08.07.2025 ರಂದು ರಾತ್ರಿ:-08-00 ಗಂಟೆಗೆ ಶ್ರೀಮಠದ ಆವರಣದಲ್ಲಿ ಖ್ಯಾತ ಹಿಂದೂಸ್ತಾನಿ ಗಾಯಕರಾದ ಸನ್ಮಾನ್ಯ ಶ್ರೀ ಜಯತೀರ್ಥ ಮೇವುಂಡಿ ಇವರಿಂದ ಸಂಗೀತ ಸಂದ್ಯಾ ಕಾರ್ಯಕ್ರಮ ನೆರವೇರಿತು. ಸದರ ಕಾರ್ಯಕ್ರಮದ ಪಾವನ ಸಾನಿದ್ಯವನ್ನು ನ್ಯಾಯ ವೇದಾಂತಾಚಾರ್ಯ ಪ. ಪೂ. ಶ್ರೀ ದಯಾನಂದ ಸರಸ್ವತಿ ಮಹಾಸ್ವಾಮಿಗಳು, ಶ್ರೀ ಪೂರ್ಣಾನಂದ ಆಶ್ರಮ, ಕಾಡರಕೊಪ್ಪ ಇವರು ವಹಿಸಿದ್ದರು. ದಿವ್ಯಸಾನಿದ್ಯವನ್ನು ಶ್ರೋ.ಬ್ರ ಸದ್ಗುರು ಸಹಜಯೋಗಿ ಶ್ರೀ ಸಹಜಾನಂದ ಮಹಾಸ್ವಾಮಿಗಳು, ಪೀಠಾಧ್ಯಕ್ಷರು, ಶ್ರೀ ಸಿದ್ಧಾರೂಢರ ದರ್ಶನ ಪೀಠ, ಚಿಕ್ಕನಂದಿ- ಮಹಾಲಿಂಗಪೂರ ಇವರು ವಹಿಸಿದ್ದರು. ಉದ್ಘಾಟಕರಾಗಿ ಸನ್ಮಾನ್ಯ ಶ್ರೀ ಶರಣಬಸವ ಚೋಳಿನ, ನಿಲಯ ನಿರ್ದೇಶಕರು, ಆಕಾಶವಾಣಿ ಕೇಂದ್ರ, ಧಾರವಾಡ ಇವರು ನೆರವೇರಿಸಿ ಸದ್ಗುರು ಶ್ರೀ ಸಿದ್ಧಾರೂಢರು ಭಜನೆ, ಕೀರ್ತನೆ, ಸಂಗೀತಕ್ಕೆ ವಿಶಿಷ್ಟ ಕೊಡುಗೆಯನ್ನು ನೀಡಿರುತ್ತಾರೆ. ದೊಡ್ಡ ದೊಡ್ಡ ಕಲಾವಿದರು ಶ್ರೀಗಳವರ ಆಶೀರ್ವಾದವನ್ನು ಪಡೆದುಕೊಂಡು ಪ್ರಖ್ಯಾತಿಯನ್ನು ಪಡೆದು ತಮ್ಮ ಜೀವನವನ್ನು ಸಾರ್ಥಕಪಡಿಸಿಕೊಂಡಿರುತ್ತಾರೆ. ಅದೇ ರೀತಿಯಾಗಿ ಶ್ರೀ ಜಯತೀರ್ಥ ವೇವುಂಡಿಯವರಿಗೂ ಸಹಿತ ಶ್ರೀ ಸಿದ್ಧಾರೂಢರ ಆಶೀರ್ವಾದ ಶ್ರೀರಕ್ಷೆ ಇರುವುದರಿಂದ ಇವರು ಸಹಿತ ಉನ್ನತ ಸ್ಥಾನವನ್ನು ಪಡೆಯುವುದರಲ್ಲಿ ಸಂದೇಹವಿಲ್ಲ ಅಂತಾ ತಮ್ಮ ಎರಡು ನುಡಿಗಳನ್ನು ಹೇಳಿದರು. ಮುಖ್ಯ ಅತಿಥಿಗಳಾಗಿ ಸನ್ಮಾನ್ಯ ಶ್ರೀ ಕೆ.ಎಲ್. ಪಾಟೀಲ, ಹಿರಿಯ ನ್ಯಾಯವಾದಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ, ಧಾರವಾಡ ಹಾಗೂ ಧರ್ಮದರ್ಶಿಗಳು, ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್ ಕಮೀಟಿ, ಹುಬ್ಬಳ್ಳಿ ಇವರು ವಹಿಸಿದ್ದರು. ಅಧ್ಯಕ್ಷತೆಯನ್ನು ಶ್ರೀಮಠದ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ ಇವರು ವಹಿಸಿದ್ದರು. ಕಲಾವಿದರಾದ ಪಂಡಿತ ಶ್ರೀ ಜಯತೀರ್ಥ ವೇವುಂಡಿ ಇವರು ನನ್ನ ಹಾಡುಗಾರಿಕೆಯ ಜೀವನವನ್ನು 34 ವರ್ಷಗಳ ಹಿಂದೆ ಶ್ರೀ ಸಿದ್ಧಾರೂಢರ ಸನ್ನಿಧಾನದಲ್ಲಿ ನೆರವೇರಿಸಿದ್ದು ನನ್ನ ಪೂರ್ವಜನ್ಮದ ಪುಣ್ಯ ಅಂತಾ ಭಾವಿಸಿದ್ದೇನೆ. ನಾನು ಏನಾದರೂ ಸಾಧನೆ ಮಾಡುತ್ತಿದ್ದರೆ ಅದು ಶ್ರೀ ಸಿದ್ಧಾರೂಢರ ಆಶೀರ್ವಾದ ಅಂತಾ ತಮ್ಮ ಅನುಭವ ಹಂಚಿಕೊ0ಡರು. ಕಾರ್ಯಕ್ರಮದ ನಿರೂಪಣೆ ಮತ್ತು ಗಣ್ಯರ ಪರಿಚಯವನ್ನು ಶ್ರೀಮಠದ ಧರ್ಮದರ್ಶಿಗಳಾದ ಶ್ರೀ ಉದಯಕುಮಾರ ಡಿ. ನಾಯಕ ನೆರವೇರಿಸಿದರು. ಪ್ರಾರ್ಥನೆಯನ್ನು ಶ್ರೀ ತುಕಾರಾಮ ಕಠಾರೆ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಧರ್ಮದರ್ಶಿಗಳಾದ ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಸಿದ್ದನಗೌಡ ಪಿ. ಪಾಟೀಲ, ಶ್ರೀಮತಿ ಗೀತಾ ಟಿ. ಕಲಬುರ್ಗಿ, ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಸಂಗೀತಾ ಸಂದ್ಯಾ ಕಾರ್ಯಕ್ರಮ

ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ನೂತನವಾಗಿ ಆಯ್ಕೆಯಾದ ಮಹಾಪೌರರ ಬೆಟ್ಟಿ.

ದಿನಾಂಕ:-01.07.2025 ರಂದು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆೆ ಹುಬ್ಬಳ್ಳಿ-ಧಾರವಾಡ ಮಹಾ ನಗರ ಪಾಲಿಕೆಗೆ ನೂತನ ಮಹಾಪೌರರಾಗಿ ಆಯ್ಕೆಯಾದ ಸನ್ಮಾನ್ಯ ಶ್ರೀಮತಿ ಜ್ಯೋತಿ ಪಾಟೀಲ ಇವರು ಶ್ರೀಮಠಕ್ಕೆ ಬೆಟ್ಟಿ ಕೊಟ್ಟು ಉಭಯಶ್ರೀಗಳವರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು ಗಣ್ಯರನ್ನು ಶ್ರೀಮಠದವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ವೈಸ್ ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಮಂಜುನಾಥ ಎಸ್. ಮುನವಳ್ಳಿ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಇಲೈಟ್ ವತಿಯಿಂದ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ & ಧರ್ಮದರ್ಶಿಗಳಾದ ಡಾ|| ಗೋವಿಂದ ಗು. ಮಣ್ಣೂರ ಇವರುಗಳನ್ನು ಸನ್ಮಾನಿಸಲಾಯಿತು.

ದಿನಾಂಕ:-01.07.2025 ರಂದು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಇಲೈಟ್ ವತಿಯಿಂದ ಲೆಕ್ಕಪರಿಶೋಧಕರ ದಿನಾಚರಣೆಯ ಅಂಗವಾಗಿ ಶ್ರೀಮಠದ ಚೇರ್‌ಮನ್ನರು ಹಾಗೂ ಲೆಕ್ಕಪರಿಶೋಧಕರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ ಮತ್ತು ವೈದ್ಯರ ದಿನಾಚರಣೆ ಅಂಗವಾಗಿ ಧರ್ಮದರ್ಶಿಗಳು ಹಾಗೂ ವೈದ್ಯರಾದ ಡಾ|| ಗೋವಿಂದ ಗು. ಮಣ್ಣೂರ ಇವರುಗಳನ್ನು ಸನ್ಮಾನಿಸಲಾಯಿತು. ಪತ್ರಕರ್ತರ ದಿನಾಚರಣೆಯ ಅಂಗವಾಗಿ ಶ್ರೀ ಗುರುರಾಜ ಹೂಗಾರ ಇವರನ್ನು ಶ್ರೀಮಠದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಶ್ರೀ ಉದಯಕುಮಾರ ಡಿ. ನಾಯ್ಕ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಇಲೈಟ್‌ನ ಸದಸ್ಯರಾದ ಶ್ರೀ ಅವಿನಾಶ ಕುರ್ತಕೋಟಿ, ಶ್ರೀ ಅಂಬಾಪ್ರಸಾದ ಮಲ್ಯಾ, ಶ್ರೀ ವೀರು ಉಪ್ಪಿನ, ಶ್ರೀ ಅಮಿತ ಪವಾರ, ಶ್ರೀ ರವಿ ಜಿಗಳೂರು, ಶ್ರೀಮತಿ ಶೋಭಾ ಜಿಗಳೂರು, ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಶ್ರೀ ಸಿದ್ಧಾರೂಢಸ್ವಾಮಿಯವರ ಮಠದಲ್ಲಿ ನೆರವೇರಿದ ವಿಶ್ವ ಯೋಗ ದಿನಾಚರಣೆ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ವಿಶ್ವ ಯೋಗದಿನಾಚರಣೆ ಸಮಾರಂಭವು ದಿನಾಂಕ: 21.06.2025 ರಂದು ಮುಂಜಾನೆ 06-30 ಗಂಟೆಗೆ ಶ್ರೀಮಠದ ಕೈಲಾಸ ಮಂಟಪದ ಮುಂದಿನ ಆವರಣದಲ್ಲಿ ನೆರವೇರಿತು. ಸದರ ಕಾರ್ಯಕ್ರಮದ ಸಾನಿಧ್ಯವನ್ನು ಪರಮ ಪೂಜ್ಯಶ್ರೀ ಬಸವಾನಂದ ಮಹಾಸ್ವಾಮಿಗಳು, ಶ್ರೀಗುರು ಬಸವಾ ಮಹಾಮನೆ ಮನಗುಂಡಿ ಇವರು ವಹಿಸಿ ಮಾತನಾಡುತ್ತಾ ಐದು ಶಕ್ತಿಗಳಿಂದ ಕೂಡಿದ್ದು ಯೋಗ, ದೈಹಿಕ ಶಕ್ತಿ, ಬುದ್ದಿ ಶಕ್ತಿ, ಪ್ರಾಣ ಶಕ್ತಿ, ಮಾನಸಿಕ ಶಕ್ತಿ, ಭಾವನಾ ಶಕ್ತಿಗಳಿಂದ ಹುಟ್ಟಿಕೊಂಡಿದ್ದು ಯೋಗ. ದೈಹಿಕ ಶಕ್ತಿಗೆ ಕರ್ಮಯೋಗ ಅಂತಾ ಭಗವದ್ಗೀತೆಯಲ್ಲಿ ಕರೆಯುತ್ತಾರೆ. ನಾವು ನಡೆಯಬೇಕಾದರೆ ಬಾಗಬೇಕಾದರೆ ಶರೀರದಲ್ಲಿ ಶಕ್ತಿ ಬೇಕು, ಪ್ರಾಣಶಕ್ತಿ ಒಂಟಿ ಕಾಲಿನಲ್ಲಿ ನಿಂತು ತಪಸ್ಸು ಮಾಡುವುದು ಹಟಯೋಗ, ಬುದ್ದಿ ಶಕ್ತಿ ಜ್ಞಾನಯೋಗ ಮನಸ್ಸಿನ ಶಕ್ತಿಯನ್ನು ಬಳಸುವುದು ಶ್ರೀ ಸಿದ್ಧಾರೂಢರು ಬುದ್ಧಿ ಶಕ್ತಿಯನ್ನು ಬಳಸುತ್ತಿದ್ದರು. ಬೇರೆ ಬೇರೆ ದೇಶಗಳು ಒಂದೊಂದು ವಿಷಯಕ್ಕೆ ಪ್ರಖ್ಯಾತಿಯನ್ನು ಪಡೆದಿರುತ್ತವೆ ಆದರೆ ಭಾರತ ದೇಶವು ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ದೇಶವಾಗಿದೆ ಇದು ನಮ್ಮೆಲ್ಲರಿಗೆ ಹೆಮ್ಮೆಯ ವಿಷಯವಾಗಿದೆ ಅಂತಾ ನುಡಿದರು. ಉದ್ಘಾಟಣೆಯನ್ನು ಶ್ರೀ ಸಿಎ. ಚನ್ನವೀರ ಮುಂಗುರವಾಡಿ, ಚೇರ್‌ಮನ್ನರು, ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್ ಕಮೀಟಿ, ಹುಬ್ಬಳ್ಳಿ. ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಧರ್ಮದರ್ಶಿಗಳಾದ ಶ್ರೀ ಉದಯಕುಮಾರ ಡಿ. ನಾಯಕ, ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ಡಾ|| ಗೋವಿಂದ ಗು. ಮಣ್ಣೂರ, ಶ್ರೀಮತಿ ಗೀತಾ ಟಿ. ಕಲಬುರ್ಗಿ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಇವರುಗಳು ಉಪಸ್ಥಿತರಿದ್ದರು. ಡಾ|| ಪಂಚಲಿಂಗಪ್ಪ ಜಂಬಣ್ಣ ಕವಲೂರು, ಶ್ರೀ ಆರೂಢ ಯೋಗಕೇಂದ್ರ, ಹುಬ್ಬಳ್ಳಿ. ಇವರು ಯೋಗ ನಡೆಸಿಕೊಟ್ಟರು. ಕಾರ್ಯಕ್ರಮದ ನಿರೂಪಣೆಯನ್ನು ಮಾಜಿ ಧರ್ಮದರ್ಶಿಗಳಾದ ಶ್ರೀ ಎಸ್.ಆಯ್.ಕೋಳಕೂರ ಇವರು ನೆರವೇರಿಸಿದರು. ಭಕ್ತಾದಿಗಳು ಮತ್ತು ಸಾರ್ವಜನಿಕರು ಇದರಲ್ಲಿ ಹೆಚ್ಚಿನ ಸಂಖ್ಯೆೆಯಲ್ಲಿ ಪಾಲ್ಗೊಂಡು ಪ್ರಯೋಜನವನ್ನು ಪಡೆದುಕೊಂಡರು.

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಡಾ|| ಪ್ರವೀಣಭಾಯಿ ತೊಗಾಡಿಯಾ ಇವರ ಭೆಟ್ಟಿ

ದಿನಾಂಕ:-16.04.2025 ರಂದು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಡಾ|| ಪ್ರವೀಣಭಾಯಿ ತೊಗಾಡಿಯಾ ಇವರು ಬೆಟ್ಟಿ ಕೊಟ್ಟು ಉಭಯಶ್ರೀಗಳವರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರಿಗೆ ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ವೈಸ್ ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ ಧರ್ಮದರ್ಶಿಗಳಾದ ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀ ಸಿದ್ಧನಗೌಡ ಪಿ. ಪಾಟೀಲ, ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರೆಂದು ಶ್ರೀಮಠದ ಅಧಿಕೃತ ಪ್ರಕಟಣೆ ಮೂಲಕ ತಿಳಿಸಿದೆ.

ಶ್ರೀ ಸಿದ್ಧಾರೂಢಸ್ವಾಮಿಯವರ ಮಠದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠದಲ್ಲಿ ದಿನಾಂಕ: 05.06.2025 ರಂದು ಮುಂಜಾನೆ 11-00 ಗಂಟೆಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರೀಮಠದ ಆವರಣದಲ್ಲಿ ಸಸಿಗಳನ್ನು ಹಚ್ಚಲಾಯಿತು. ಪರಿಸರ ತಜ್ಞರು ಹಾಗೂ ಪರಿಸರ ಪ್ರೇಮಿಗಳಾದ ಡಾ|| ಮಹಾಂತೇಶ ತಪಶೆಟ್ಟಿ ಇವರು ಅತಿಥಿಗಳಾಗಿ ಆಗಮಿಸಿ ಗಿಡಗಳನ್ನು ಹಚ್ಚುವ ಪದ್ದತಿ ಹಾಗೂ ಮುಂಜಾಗ್ರತೆಯನ್ನು ವಹಿಸುವುದು ಪಾಲನೆ ಪೋಷಣೆ ಮಾಡುವುದರ ಬಗ್ಗೆ ತಿಳಿಸಿಕೊಟ್ಟರು. ಅತಿಥಿಗಳಾಗಿ ಆಗಮಿಸಿದ ಉದ್ಯಮಿಗಳಾದ ಶ್ರೀ ಚನ್ನು ಹೊಸಮನಿ ಇವರು ಶ್ರೀಮಠದ ಆವರಣದಲ್ಲಿ ಪ್ಲಾಸ್ಟಿಕ ನಿರ್ಮೂಲನೆ ಮಾಡಲು ಸಂದೇಶ ನೀಡಿದರು. ಟ್ರಸ್ಟ ಕಮೀಟಿಯ ವೈಸ್ ಚೇರ್‌ಮನ್ನರಾದ ಶ್ರೀ ವಿನಾಯಕ ಅ ಘೋಡಕೆ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಧರ್ಮದರ್ಶಿಗಳಾದ ಶ್ರೀ ಉದಯಕುಮಾರ ಡಿ. ನಾಯ್ಕ ಇವರು ಪ್ಲಾಸ್ಟಿಕನ್ನು ಮಿತವಾಗಿ ಬಳಸುವುದರ ಜೊತೆಗೆ ಪರಿಸರವನ್ನು ಸಂರಕ್ಷಿಸಲು ಕರೆ ನೀಡಿದರು. ಕಾರ್ಯಕ್ರಮದ ನಿರೂಪಣೆ ಮತ್ತು ಸ್ವಾಗತವನ್ನು ಟ್ರಸ್ಟ ಕಮೀಟಿಯ ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಕಲಬುರ್ಗಿಯವರು ನಿರ್ವಹಿಸಿದರು. ವಂದನಾರ್ಪಣೆಯನ್ನು ಧರ್ಮದರ್ಶಿಗಳಾದ ಶ್ರೀಮತಿ ಸರ್ವಮಂಗಳಾ ನಾ. ಪಾಠಕ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ ಕಮೀಟಿಯ ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಧರ್ಮದರ್ಶಿಗಳಾದ ಡಾ|| ಗೋವಿಂದ ಮಣ್ಣೂರ, ಶ್ರೀ ಮಂಜುನಾಥ ಮುನವಳ್ಳಿ ಹಾಗೂ ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ಎಸ್. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರೆಂದು ಟ್ರಸ್ಟ ಕಮೀಟಿಯ ಪ್ರಕಟಣೆ ಮೂಲಕ ತಿಳಿಸಿದೆ.

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಜೋಗಾರಾಮ ಪಟೇಲ ಇವರ ಭೆಟ್ಟಿ

ದಿನಾಂಕ:-30.05.2025 ರಂದು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ರಾಜಸ್ಥಾನ ರಾಜ್ಯದ ಕಾನೂನು ಹಾಗೂ ಸಂಸ್ಥದೀಯ ವ್ಯವಹಾರ ಸಚಿವರಾದ ಸನ್ಮಾನ್ಯ ಶ್ರೀ ಜೋಗಾರಾಮ ಪಟೇಲ ಹಾಗೂ ರಾಜಸ್ಥಾನದ ಶಾಸಕರಾದ ಸನ್ಮಾನ್ಯ ಶ್ರೀ ಅರುಣ ಚೌದರಿ ಇವರು ಬೆಟ್ಟಿ ಕೊಟ್ಟು ಉಭಯಶ್ರೀಗಳವರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರಿಗೆ ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಗೌರವವನ್ನು ಸ್ವೀಕರಿಸಿದ ಸಚಿವರು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆ ದರ್ಶನ ಪಡೆದು ಇಂತಹ ಪುಣ್ಯ ಕ್ಷೇತ್ರದ ದರ್ಶನ ಮಾಡಿದ್ದು ನನ್ನ ಪುಣ್ಯವೆಂದು ನುಡಿದು ಅತೀವ ಆನಂದವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಮಾಜಿ ಚೇರ್‌ಮನ್ನರಾದ ಶ್ರೀ ಮಹೇಂದ್ರ ಸಿಂಘಿ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರೆಂದು ಶ್ರೀಮಠದ ಅಧಿಕೃತ ಪ್ರಕಟಣೆ ಮೂಲಕ ತಿಳಿಸಿದೆ.




  VIEW ALL