Shri Siddharoodha Swamiji Math Trust Committee

Hubballi

www.srisiddharoodhaswamiji.in

ಒಂಭತ್ತನೇಯ ವರ್ಷದ ರಾಜ್ಯಮಟ್ಟದ ಭಜನಾ ಸ್ಪರ್ಧೆಯ ಉದ್ಘಾಟನಾ ಸಮಾರಂಭ
Date : 10-04-2024
ಹುಬ್ಬಳ್ಳಿಯ ಜಗದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಜಗದ್ಗುರು ಶ್ರೀ ಸಿದ್ಧಾರೂಢಸ್ವಾಮಿಯವರ 188 ನೇ ಜಯಂತ್ಯೋತ್ಸವದ ನಿಮಿತ್ಯವಾಗಿ ಹಮ್ಮಿಕೊಂಡ ಒಂಭತ್ತನೇಯ ವರ್ಷದ ರಾಜ್ಯಮಟ್ಟದ ಭಜನಾ ಸ್ಪರ್ಧೆಯನ್ನು ದಿನಾಂಕ:-10.04.2024 ರಂದು ಮುಂಜಾನೆ :- 10-00 ಘಂಟೆಗೆ ಉದ್ಘಾಟನಾ ಸಮಾರಂಭವು ಜರುಗಿತು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಭಜನಾ ಸ್ಪರ್ಧೆಯ ಅಧ್ಯಕ್ಷರಾದ ಶ್ರೀ ಶಾಮಾನಂದ ಪೂಜೇರಿಯವರು ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರುಅಧ್ಯಕ್ಷತೆಯನ್ನು ಶ್ರೀಮಠದ ಚೇರ್‌ಮನ್ನರಾದ ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಸರ್ವಮಂಗಳಾ ಎನ್. ಪಾಠಕ, ಧರ್ಮದರ್ಶಿಗಳಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ರಮೇಶ ಎಸ್. ಬೆಳಗಾವಿ, ಶ್ರೀ ವಿನಾಯಕ ಅ. ಘೋಡ್ಕೆ, ಶ್ರೀಮತಿ ಗೀತಾ ಟಿ. ಕಲಬುರ್ಗಿ ಉಪಸ್ಥಿತರಿದ್ದರು, ಗೌರವ ಕಾರ್ಯದರ್ಶಿಗಳಾದ ಶ್ರೀ ಎಸ್.ಆಯ್.ಕೋಳಕೂರ ಇವರು ಕಾರ್ಯಕ್ರಮ ನಿರೂಪಿಸಿದರು, ಶ್ರೀ ಮಠದ ಮ್ಯಾನೇಜರ್ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗದವರು ಹಾಗೂ ಭಕ್ತರು ಹಾಜರಿದ್ದರು.