Shri Siddharoodha Swamiji Math Trust Committee

Hubballi

www.srisiddharoodhaswamiji.in

ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಾಧೀಶರಾದ ಸನ್ಮಾನ್ಯ ಶ್ರೀ ಉಮೇಶ ಅಡಿಗ ಇವರ ಭೆಟ್ಟಿ
Date : 10-04-2024
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ದಿನಾಂಕ:-09.04.2024 ರಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಸನ್ಮಾನ್ಯ ಶ್ರೀ ಉಮೇಶ ಅಡಿಗ ಹಾಗೂ ಇವರ ಜೊತೆಗೆ ಕರ್ನಾಟಕ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಸನ್ಮಾನ್ಯ ಶ್ರೀ ಎ.ಎಸ್.ಬೆಳ್ಳೂಂಕಿ ಇವರು ಶ್ರೀಮಠಕ್ಕೆ ಆಗಮಿಸಿ ಉಭಯ ಶ್ರೀಗಳವರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ನ್ಯಾಯಾಧೀಶರುಗಳನ್ನು ಶ್ರೀಮಠದ ವತಿಯಿಂದÀ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಮಠದ ವೈಸ್-ಚೇರ್‌ಮನ್ನರಾದ ಶ್ರೀ ಉದಯಕುಮಾರ ಡಿ. ನಾಯ್ಕ, ಧರ್ಮದರ್ಶಿಗಳಾದ ಶ್ರೀ ಚೆನ್ನವೀರ ಡಿ. ಮುಂಗುರವಾಡಿ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ವಿನಾಯಕ ಅ. ಘೋಡ್ಕೆ ಹಾಗೂ ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ಎಸ್. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಭಕ್ತರು ಉಪಸ್ಥಿತರಿದ್ದರು.