Shri Siddharoodha Swamiji Math Trust Committee

Hubballi

www.srisiddharoodhaswamiji.in

ರಮ್‌ಜಾನ್ ಹಬ್ಬದ ನಿಮಿತ್ಯ ಮುಸ್ಲಿಂ ಬಾಂಧವರ ಭೆಟ್ಟಿ
Date : 11-04-2024
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ದಿನಾಂಕ:-೧೧-೦೪-೨೦೨೪ ರಂದು ರಮ್‌ಜಾನ್ ಹಬ್ಬದ ನಿಮಿತ್ಯವಾಗಿ ಮುಸ್ಲಿಂ ಬಾಂಧವರಾದ ಡಾ|| ಬಿಜಾಪೂರ, ಶ್ರೀ ಶಿರಾಜ್‌ಅಹಮದ್ ಖುರ್ಚಿವಾಲೆ, ಶ್ರೀ ಎಜಾಜ್ ಜಾಗೀರದಾರ ಹಾಗೂ ಇತರರು ಶ್ರೀಮಠಕ್ಕೆ ಆಗಮಿಸಿ ಉಭಯ ದರ್ಶನಾಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿ ವತಿಯಿಂದ ರಮ್‌ಜಾನ್ ಹಬ್ಬದ ಶುಭಾಶಯಗಳನ್ನು ತಿಳಿಸಿ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ಧರ್ಮದರ್ಶಿಗಳಾದ ಶ್ರೀ ಚೆನ್ನವೀರ ಡಿ. ಮುಂಗುರವಾಡಿ, ಶ್ರೀ ರಮೇಶ ಎಸ್. ಬೆಳಗಾವಿ, ಶ್ರೀ ಶಾಮಾನಂದ ಬಾ. ಪೂಜೇರಿ, ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ, ಮಾಜಿ ಧರ್ಮದರ್ಶಿಗಳಾದ ಶ್ರೀ ಜಿ.ಎಸ್.ನಾಯ್ಕ, ಭಕ್ತರಾದ ಶ್ರೀ ಶಾಂತರಾಜ ಪೋಳ ಹಾಗೂ ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ಎಸ್. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಭಕ್ತರು ಉಪಸ್ಥಿತರಿದ್ದರು