Shri Siddharoodha Swamiji Math Trust Committee

Hubballi

www.srisiddharoodhaswamiji.in

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಗುರುಪೂರ್ಣಿಮೆ ಆಚರಣೆ
Date : 21-07-2024
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ಇದೇ ದಿನಾಂಕ: 21.07.2024 ರಂದು ಗುರುಪೂರ್ಣಿಮೆ ನಿಮಿತ್ಯ ವಿವಿಧ ಕಾರ್ಯಕ್ರಮಗಳು ನಡೆದವು ಬೆಳಿಗ್ಗೆ 6-೦೦ ಘಂಟೆಗೆ ಕಾಕಡಾರತಿ ಪೂಜೆ, 12-3೦ ಘಂಟೆಗೆ ಅನ್ನ ಸಂತರ್ಪಣೆ, ಮುಂಜಾನೆ:-೦7-೦೦ ರಿಂದ 12-3೦ ರ ವರೆಗೆ ಅಭಿಷೇಕ, ಸಾಯಂಕಾಲ : ೦7-೦೦ ಘಂಟೆಗೆ ಶ್ರೀಗಳವರ ಮಂದಿರದಲ್ಲಿ ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ ಜರುಗಿತು, ಗುರುವಂದನಾ ಸಮಾರಂಭದ ಸಾನಿಧ್ಯವನ್ನು ಪರಮಪೂಜ್ಯಶ್ರೀ ಸಹಜಾನಂದ ಸ್ವಾಮಿಗಳು ಪೀಠಾಧ್ಯಕ್ಷರು ಸಿದ್ಧಾರೂಢ ದರ್ಶನಪೀಠ, ಚಿಕ್ಕನಂದಿ ಹಾಗೂ ಮಹಾಲಿಂಗಪೂರ ಇವರು ವಹಿಸಿದ್ದರು. ನೇತೃತ್ವವನ್ನು ಪರಮ ಪೂಜ್ಯ ಶ್ರೀ ಬಸವರಾಜ ಸ್ವಾಮಿಗಳು, ಶಿವಾನಂದ ಮಠ, ರನ್ನ ಬೆಳಗಲಿ ಇವರು ವಹಿಸಿದ್ದರು. ಪರಮ ಪೂಜ್ಯ ಶ್ರೀ ಸದಾಶಿವ ಗುರೂಜಿ, ರನ್ನಬೆಳಗಲಿ, ಪರಮ ಪೂಜ್ಯ ಶ್ರೀ ಪರಿಪೂರ್ಣಾನಂದ ಸ್ವಾಮಿಗಳು, ಬೆಳಹೊಡ, ಪರಮ ಪೂಜ್ಯ ಶ್ರೀ ಆತ್ಮಾನಂದ ಸ್ವಾಮಿಗಳು, ಗೋಕಾಕ, ಪರಮ ಪೂಜ್ಯ ಶ್ರೀ ಶಾಂತಾನAದ ಸ್ವಾಮಿಗಳು, ಶ್ರೀ ಸಿದ್ಧಾರೂಢ ಮಠ, ಹುಬ್ಬಳ್ಳಿ ಇವರುಗಳು ಉಪಸ್ಥಿತರಿದ್ದರು, ಅಧ್ಯಕ್ಷತೆಯನ್ನು ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ಚೇರಮನ್ನರು, ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್ ಕಮೀಟಿ ಹುಬ್ಬಳ್ಳಿ ಇವರು ವಹಿಸಿದ್ದರು. ಪೂಜ್ಯ ಮಹಾತ್ಮರಿಗೆ ಶ್ರೀಮಠದ ವತಿಯಿಂದ ಸನ್ಮಾನಿಸಲಾಯಿತು. ಧರ್ಮದರ್ಶಿಗಳಾದ ಶ್ರೀ ಶಾಮಾನಂದ ಬಾ. ಪೂಜೇರಿ, ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು, ಮಾಜಿ ಧರ್ಮದರ್ಶಿಗಳಾದ ಶ್ರೀ ಎಸ್.ಆಯ್.ಕೋಳಕೂರ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಧರ್ಮದರ್ಶಿಗಳಾದ ಡಾ|| ಗೋವಿಂದ ಜಿ. ಮಣ್ಣೂರ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಚನ್ನವೀರ ಡಿ. ಮುಂಗುರವಾಡಿ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀ ವಿನಾಯಕ ಅ. ಘೋಡ್ಕೆ, ಶ್ರೀಮತಿ ಗೀತಾ ಟಿ. ಕಲಬುರ್ಗಿ ಹಾಗೂ ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು