Shri Siddharoodha Swamiji Math Trust Committee

Hubballi

www.srisiddharoodhaswamiji.in

Events Of Current Months

ಶ್ರೀ ಸಿದ್ಧಾರೂಢಸ್ವಾಮಿಗಳ ಜನ್ಮೋತ್ಸವ
Date:-06.04.2025 ಶ್ರೀ ಸಿದ್ಧಾರೂಢಸ್ವಾಮಿಗಳ ಜನ್ಮೋತ್ಸವ
ಶ್ರೀ ಸಿದ್ಧಾರೂಢಸ್ವಾಮಿಗಳ ಜನ್ಮೋತ್ಸವ ನಿಮಿತ್ಯ ಸಪ್ತಾಹ
Date:-30.03.2025 ಯುಗಾದಿ ಪ್ರತಿಪದ, ಶ್ರೀ ಸಿದ್ಧಾರೂಢಸ್ವಾಮಿಗಳ ಜನ್ಮೋತ್ಸವ ನಿಮಿತ್ಯ ಸಪ್ತಾಹ ಆರಂಭ

Daily News
ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಭಜನಾ ಸಮಾವೇಶ ಉದ್ಘಾಟನಾ ಸಮಾರಂಭ.

ಹುಬ್ಬಳ್ಳಿಯ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಸದ್ಗುರು ಶ್ರೀ ಸಿದ್ಧಾರೂಢಸ್ವಾಮಿಯವರ ಜಯಂತ್ಯೋತ್ಸವದ ನಿಮಿತ್ಯವಾಗಿ ಹತ್ತನೇ ವರ್ಷದ ಭಜನಾ ಸಮಾವೇಶದ ಉದ್ಘಾಟನಾ ಸಮಾರಂಭವನ್ನು ನೆರವೇರಿಸಲಾಯಿತು. ಹಿರಿಯ ಧರ್ಮದರ್ಶಿಗಳು ಹಾಗೂ ನ್ಯಾಯವಾದಿಗಳಾದ ಶ್ರೀ ಕೆ.ಎಲ್.ಪಾಟೀಲ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಜ್ಯ ಮಟ್ಟದ ಭಜನಾ ಸಮಾವೇಶದ ಕಾರ್ಯಾಧ್ಯಕ್ಷರಾದ ಶ್ರೀ ಶಾಮಾನಂದ ಬಾ. ಪೂಜೇರಿ ಇವರು ಎಲ್ಲರನ್ನು ಸ್ವಾಗತಿಸಿದರು. ದಿವ್ಯ ಸಾನಿದ್ಯವನ್ನು ಪರಮ ಪೂಜ್ಯ ಶ್ರೀ ಆತ್ಮಾನಂದ ಮಹಾಸ್ವಾಮಿಗಳು ವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮಠದ ಚೇರ್‌ಮನ್ನರಾದ ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ ಇವರು ವಹಿಸಿದ್ದರು. ರಾಜ್ಯ ಮಟ್ಟದ ಭಜನಾ ಸಮಾವೇಶದ ಅಧ್ಯಕ್ಷರಾದ ಶ್ರೀ ಮಂಜುನಾಥ ಎಸ್. ಮುನವಳ್ಳಿ ಇವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಸರ್ವಮಂಗಳಾ ಎನ್. ಪಾಠಕ, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ ಹಾಗೂ ಶ್ರೀ ಮಠದ ಮ್ಯಾನೇಜರ್ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗದವರು ಹಾಗೂ ಭಕ್ತರು ಹಾಜರಿದ್ದರೆಂದು ಶ್ರೀಮಠದ ಪ್ರಕಟಣೆ ಮೂಲಕ ತಿಳಿಸಲಾಗಿದೆ.

ವಿಜೃಂಭಣೆಯಿAದ ಜರುಗಿದ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಗಳವರ 190 ನೇ ಜನ್ಮೋತ್ಸವ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಶ್ರೀ ಸಿದ್ಧಾರೂಢ ಸ್ವಾಮಿಗಳವರ ೧೯೦ ನೇ ಜನ್ಮೋತ್ಸವವನ್ನು ದಿನಾಂಕ: 06-04-2025 ರಂದು ಅತೀ ವಿಜೃಂಭಣೆಯಿ0ದ ನೆರವೇರಿಸಲಾಯಿತು. ಜನ್ಮೋತ್ಸವದ ಅಂಗವಾಗಿ ಪ್ರಾತ:ಕಾಲ 5.30 ಘಂಟೆಗೆ ಉಭಯಶ್ರೀಗಳವರ ಗದ್ದುಗೆಗಳಿಗೆ ಅಭೀಷೇಕ, ಅಪರಾಹ್ನ:12-00 ಘಂಟೆಗೆ ಸುಮಂಗಲೆಯರಿಗೆ ಉಡಿತುಂಬುವುದು, 12-30 ಘಂಟೆಗೆ ಶ್ರೀಗಳವರ ಉತ್ಸವ ಮೂರ್ತಿಯ ಪಾಲಕಿಯು ವಾದ್ಯಮೇಳಗಳೊಂದಿಗೆ ಹೊರಟು ನಗರದಲ್ಲಿ ಸಂಚರಿಸಿ ಬಂದ ನಂತರ ಸಾಯಂಕಾಲ:5-30 ಘಂಟೆಗೆ ಕುಂಭಹೊತ್ತ ಮಹಿಳೆಯರು ಶ್ರೀಮಠಕ್ಕೆ ಬರಮಾಡಿಕೊಂಡರು. 5-45 ಘಂಟೆಗೆ ಶ್ರೀಮಠದ ಕೈಲಾಸಮಂಟಪದಲ್ಲಿ ತೊಟ್ಟಿಲೋತ್ಸವ ಕಾರ್ಯಕ್ರಮಕ್ಕೆ ಶ್ರೀ ಮಠದ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ ಇವರು ಚಾಲನೆಯನ್ನು ನೀಡಿದರು. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಟ್ರಸ್ಟ್ ಕಮೀಟಿಯ ವೈಸ್ ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಧರ್ಮದರ್ಶಿಗಳಾದ ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ಡಾ||ಗೋವಿಂದ ಗು. ಮಣ್ಣೂರ, ಶ್ರೀಮತಿ ಸರ್ವಮಂಗಳಾ ಎನ್. ಪಾಠಕ, ಶ್ರೀ ವಸಂತ ವಾಯ್. ಸಾಲಗಟ್ಟಿ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀಮತಿ ಗೀತಾ ಟಿ. ಕಲಬುರ್ಗಿ, ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ತುಪ್ಪದ, ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸದರ ಕಾರ್ಯಕ್ರಮದ ಪ್ರಯೋಜನವನ್ನು ಕರ್ನಾಟಕ, ಮಹಾರಾಷ್ಟ, ಗೋವಾ ಹಾಗೂ ಇನ್ನೂ ಅನೇಕ ಊರುಗಳಿಂದ ಬಂದ ಸಾವಿರಾರು ಜನ ಭಕ್ತ ಸಮೂಹ ಪಡೆದುಕೊಂಡರು

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಪದಾಧಿಕಾರಿಗಳ ಆಯ್ಕೆ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ದಿನಾಂಕ: 31.03.2025 ರಂದು ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯ ಅಧ್ಯಕ್ಷತೆಯನ್ನು ಧರ್ಮದರ್ಶಿಗಳಾದ ಶ್ರೀ ಕೆ.ಎಲ್.ಪಾಟೀಲ ಇವರು ವಹಿಸಿಕೊಂಡು ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚೇರ್‌ಮನ್ನರಾಗಿ ಶ್ರೀ ಚನ್ನವೀರ ಡಿ. ಮುಂಗುರವಾಡಿ ಇವರು ಆಯ್ಕೆಯಾದರು, ವೈಸ್ ಚೇರ್‌ಮನ್ನರಾಗಿ ಶ್ರೀ ವಿನಾಯಕ ಅ. ಘೋಡ್ಕೆ ಇವರು ಆಯ್ಕೆಯಾದರು, ಗೌರವ ಕಾರ್ಯದರ್ಶಿಗಳಾಗಿ ರಮೇಶ ಎಸ್. ಬೆಳಗಾವಿ ಇವರು ಆಯ್ಕೆಯಾದರು, ಇವರುಗಳನ್ನು ದಿನಾಂಕ:-31-03-2025 ರಿಂದ 01-04-2025 ರ ಅವಧಿಗಾಗಿ ಆಯ್ಕೆ ಮಾಡಲಾಯಿತು,

Date:-22.02.2025 ವಿಶ್ವ ವೇದಾಂತ ಪರಿಷತ್ ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯ ಸ್ವಾಮೀಜಿಗಳು ಮತ್ತು ಜ್ಞಾನರು

Date:-22.02.2025 ವಿಶ್ವ ವೇದಾಂತ ಪರಿಷತ್ ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯ ಸ್ವಾಮೀಜಿಗಳು ಮತ್ತು ಜ್ಞಾನರು

Date:-21.02.2025 ವಿಶ್ವ ವೇದಾಂತ ಪರಿಷತ್ ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯ ಸ್ವಾಮೀಜಿಗಳು ಮತ್ತು ಜ್ಞಾನರು

ವಿಶ್ವ ವೇದಾಂತ ಪರಿಷತ್ ಕಾರ್ಯಕ್ರಮದ ಉದ್ಘಾಟನೆ ಕಾರ್ಯಕ್ರಮ

ವಿಶ್ವ ವೇದಾಂತ ಪರಿಷತ್ ಕಾರ್ಯಕ್ರಮದ ಉದ್ಘಾಟನೆ ಕಾರ್ಯಕ್ರಮ

Date:-20.02.2025 ವಿಶ್ವ ವೇದಾಂತ ಪರಿಷತ್ ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯ ಸ್ವಾಮೀಜಿಗಳು ಮತ್ತು ಜ್ಞಾನರು

Date:-20.02.2025 ವಿಶ್ವ ವೇದಾಂತ ಪರಿಷತ್ ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯ ಸ್ವಾಮೀಜಿಗಳು ಮತ್ತು ಜ್ಞಾನರು

ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳ ಆರೂಢ ಜ್ಯೋತಿ ಯಾತ್ರೆಯ ಮೆರವಣಿಗೆ ಕಾರ್ಯಕ್ರಮ...

ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳ ಆರೂಢ ಜ್ಯೋತಿ ಯಾತ್ರೆಯ ಮೆರವಣಿಗೆ ಕಾರ್ಯಕ್ರಮ...




  VIEW ALL