Shri Siddharoodha Swamiji Math Trust Committee

Hubballi

www.srisiddharoodhaswamiji.in

Events Of Current Months

ಲಕ್ಷದೀಪೋತ್ಸವ
08-12-2026 ಛಟ್ಟಿ ಅಮವಾಸ್ಯೆ, ಶ್ರೀಮಠದಲ್ಲಿ ಲಕ್ಷದೀಪೋತ್ಸವ
ಶ್ರೀ ನಿಜಗುಣ ಶಿವಯೋಗಿಗಳ ಜಯಂತಿ ಮುಕ್ತಾಯ
Date:-02.12.2026 ಶ್ರೀ ನಿಜಗುಣ ಶಿವಯೋಗಿಗಳ ಜಯಂತಿ ಮುಕ್ತಾಯ

Daily News
ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ಜಗದೀಶ ಶೆಟ್ಟರ ಇವರ ಭೆಟ್ಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-21.12.2025 ರಂದು ಬೆಳಗಾವಿ ಲೋಕ ಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಜಗದೀಶ ಶೆಟ್ಟರ ಇವರು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಶ್ರೀ ಕೆ.ಎಲ್.ಪಾಟೀಲ, ಶ್ರೀ ಶಾಮಾನಂದ ಬಾ. ಪೂಜೇರಿ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಉದಯಕುಮಾರ ಡಿ. ನಾಯಕ, ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ, ಶ್ರೀ ವಿ.ವಿ.ಮಲ್ಲಾಪೂರ, ಶ್ರೀ ಸಿದ್ಧನಗೌಡ ಪಿ. ಪಾಟೀಲ, ಶ್ರೀ ವಸಂತ ವಾಯ್. ಸಾಲಗಟ್ಟಿ, ಹಾಗೂ ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಶ್ರೀಮಠದ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು

ಶ್ರೀ ಸಿದ್ಧಾರೂಢಸ್ವಾಮಿಯವರ ಮಠದ ಪುಷ್ಕರಣಿಯಲ್ಲಿ ಆರೂಢ ಆರತಿ

ದಿನಾಂಕ:19.12.2025 ರಂದು ಸಂಜೆ 06-15 ಗಂಟೆಗೆ ಶ್ರೀಮಠದ ಮಾನ್ಯ ಮುಖ್ಯ ಆಡಳಿತಾಧಿಕಾರಿಗಳು ಮತ್ತು ಧಾರವಾಡ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಸನ್ಮಾನ್ಯ ಶ್ರೀಮತಿ ಬಿ.ಎಸ್. ಭಾರತಿ ಇವರು ಆರತಿ ಮಾಡುವುದರೊಂದಿಗೆ ಉದ್ಘಾಟಿಸಿದರು. ದಿವ್ಯ ಸಾನಿಧ್ಯವನ್ನು ಪರಮ ಪೂಜ್ಯಶ್ರೀ ಅಭಿನವ ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳು ಇವರು ವಹಿಸಿದ್ದರು. ಸಾನಿಧ್ಯವನ್ನು ಅ.ಬ.ಪ.ಪೂಜ್ಯಶ್ರೀ ಯಶವಂತ ಭುವಾ ಭೋದಲೆ ಮಹಾರಾಜರು ಪಂಡರಪುರ ಇವರು ವಹಿಸಿದ್ದರು. ಅಧ್ಯಕ್ಷತೆಯನ್ನು ಟ್ರಸ್ಟ ಕಮೀಟಿಯ ಚೇರಮನ್ನರಾದ ಸಿ.ಎ. ಶ್ರೀ ಚನ್ನವೀರ ಮುಂಗುರವಾಡಿ ಇವರು ವಹಿಸಿದ್ದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಪದಾಧಿಕಾರಿಗಳು, ಧರ್ಮದರ್ಶಿಗಳು ಹಾಗೂ ಅಪಾರ ಭಕ್ತವೃಂದ ಉಪಸ್ಥಿತರಿದ್ದರು.

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ಶಾಕೀರ ಸನದಿ ಇವರ ಭೆಟ್ಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-09.12.2025 ರಂದು ಸನ್ಮಾನ್ಯ ಶ್ರೀ ಶಾಕೀರ ಸನದಿ, ಅಧ್ಯಕ್ಷರು, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಇವರು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ 100 ವರ್ಷಗಳ ಪುರಾತನ ಶ್ರೀಮಠದ ಕೆರೆಯನ್ನು ಅಂದಾಜು 4 ಕೋಟಿ ರೂಗಳಲ್ಲಿ ಸೌಂದರೀಕರಣದೊAದಿಗೆ ಅಭಿವೃದ್ಧಿಪಡಿಸಬೇಕೆಂದು ಟ್ರಸ್ಟ್ ಕಮೀಟಿಯಿಂದ ಮನವಿಯನ್ನು ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಅಧ್ಯಕ್ಷರು ಪ್ರಾಧಿಕಾರದ ಅನುದಾನದಲ್ಲಿ ಅಭಿವೃದ್ಧಿಪಡಿಸುವುದಾಗಿ ಭರವಸೆಯನ್ನು ನೀಡಿದರು ಈ ಸಮಯದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಧರ್ಮದರ್ಶಿಗಳಾದ ಡಾ|| ಗೋವಿಂದ ಗು. ಮಣ್ಣೂರ ಮತ್ತು ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಶಾಸಕರಾದ ಸನ್ಮಾನ್ಯ ಶ್ರೀ ಎಮ್.ಕೃಷ್ಣಪ್ಪ ಹಾಗೂ ಪ್ರಿಯಾ ಕೃಷ್ಣ ಇವರ ಭೆಟ್ಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-09.12.2025 ರಂದು ವಿಜಯನಗರ ಮತ ಕ್ಷೇತ್ರದ ವಿಧಾನ ಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಎಮ್.ಕೃಷ್ಣಪ್ಪ ಹಾಗೂ ಗೋವಿಂದರಾಜ ನಗರ ವಿಧಾನ ಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಪ್ರಿಯಾ ಕೃಷ್ಣ ಇವರುಗಳು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಧರ್ಮದರ್ಶಿಗಳಾದ ಶ್ರೀ ಮಂಜುನಾಥ ಎಸ್. ಮುನವಳ್ಳಿ ಮತ್ತು ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ವಿಶ್ವನಾಥ ಸಜ್ಜನರ ಐ.ಪಿ.ಎಸ್. ಇವರ ಭೆಟ್ಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-01.12.2025 ರಂದು ಹೈದ್ರಾಬಾದ ಪೊಲೀಸ್ ಆಯುಕ್ತರಾದ ಸನ್ಮಾನ್ಯ ಶ್ರೀ ವಿಶ್ವನಾಥ ಸಜ್ಜನವರ, ಐ.ಪಿ.ಎಸ್., ಇವರು ಶ್ರೀಮಠಕ್ಕೆ ಕುಟುಂಬ ಸಮೇತರಾಗಿ ಭೆಟ್ಟಿ ಕೊಟ್ಟು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮಾನ್ಯ ಶ್ರೀ ವಿಶ್ವನಾಥ ಸಜ್ಜನರ ಇವರು ಶ್ರೀಮಠಕ್ಕೆ ೧೦೦ ಸೌಂದರೀಕರಣದ ಗಿಡಗಳ ಕುಂಡಲಿಗಳನ್ನು ದೇಣಿಗೆಯಾಗಿ ನೀಡಿರುತ್ತಾರೆ. ಸದರಿ ಕುಂಡಲಿಗಳಿಗೆ ನೀರು ಹಾಕುವ ಮುಖಾಂತರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀಮಠದ ಮ್ಯಾನೇಜರ್‌ರಾದ ಶ್ರೀ ಈರಣ್ಣ ಸೋ. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು

ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ನಡೆದ ಲಕ್ಷ ದೀಪೋತ್ಸವ

ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ದಿನಾಂಕ: 20.11.2025 ರಂದು ಸಾಯಂಕಾಲ 06-30 ಘಂಟೆಗೆ ಶ್ರೀಮಠದ ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು, ಧಾರವಾಡ ಜಿಲ್ಲಾ, ಧಾರವಾಡದ ಸನ್ಮಾನ್ಯ ಶ್ರೀಮತಿ ಬಿ.ಎಸ್.ಭಾರತಿ ಹಾಗೂ ಇವರ ಪತಿಯಾದ ಶ್ರೀ ರಾಜಶೇಖರ, ಧಾರವಾಡ ಜಿಲ್ಲಾ ನ್ಯಾಯಾಧೀಶರಾದ ಶ್ರೀಮತಿ ವೀಣಾ ನಾಯಕ, ಇವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಈ ಮಹತ್ವಪೂರ್ಣ ಕಾರ್ಯಕ್ರಮದಲ್ಲ್ಲಿ ಭಾಗವಹಿಸಿದವರೆಲ್ಲರಿಗೂ ಶುಭಮಂಗಲವಾಗಲೆAದು ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಚೇರಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ ವಹಿಸಿದ್ದರು, ಧರ್ಮದರ್ಶಿಗಳಾದ ಶ್ರೀ ಶಾಮಾನಂದ ಬಾ. ಪೂಜೇರಿ ಇವರು ಎಲ್ಲರನ್ನು ಸ್ವಾಗತಿಸಿದರು, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ ಇವರು ಕಾರ್ಯಕ್ರಮವನ್ನು ನಿರೂಪಿಸಿದರು, ಪ್ರಾರ್ಥನೆಯನ್ನು ಶ್ರೀ ಸದಾನಂದ ಬೆಂಡಿಗೇರಿ ಇವರು ನೆರವೇರಿಸಿದರು. . ಈ ಸಂದರ್ಭದಲ್ಲಿ ವೈಸ್ ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡ್ಕೆ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಧರ್ಮದರ್ಶಿಗಳಾದ ಶ್ರೀ ಮಂಜುನಾಥ ಎಸ್. ಮುನವಳ್ಳಿ, ಶ್ರೀ ವಿ.ವಿ.ಮಲ್ಲಾಪೂರ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀಮತಿ ಸರ್ವಮಂಗಳಾ ಎನ್. ಪಾಠಕ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀ ಕೆ.ಎಲ್.ಪಾಟೀಲ, ಶ್ರೀ ವಿ.ಡಿ.ಕಾಮರಡ್ಡಿ, ಶ್ರೀ ಸಿದ್ದನಗೌಡ ಪಿ. ಪಾಟೀಲ, ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ, ಶ್ರೀ ವಸಂತ ವಾಯ್. ಸಾಲಗಟ್ಟಿ, ಮಾಜಿ ಚೇರ್‌ಮನ್ನರಾದ ಶ್ರೀ ಮಹೇಂದ್ರ ಸಿಂಘಿ, ಮಾಜಿ ಗೌರವ ಕಾರ್ಯದರ್ಶಿಗಳಾದ ಶ್ರೀ ರಂಗಾ ಬದ್ದಿ, ಶ್ರೀ ಎಸ್.ಆಯ್.ಕೋಳಕೂರ, ಮಾಜಿ ಧರ್ಮದರ್ಶಿಗಳಾದ ಶ್ರೀ ಮಹೇಶ ಹನಗೋಡಿ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ದೀಪಾ ಗೌರಿ ಹಾಗೂ ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ತುಪ್ಪದ ಹಾಗೂ ಸಿಬ್ಬಂದಿವರ್ಗದವರು ಮತ್ತು ಅನೇಕ ಭಕ್ತರು ಉಪಸ್ಥಿತರಿದ್ದರು. ದೀಪೋತ್ಸವದಲ್ಲಿ ಅತೀ ಹೆಚ್ಚು ಉತ್ಸುಕತೆಯಿಂದ ಸೇವೆ ಸಲ್ಲಿಸಿದ ಭಕ್ತರಿಗೆ, ಸೇವಕರಿಗೆ, ಪಾಠಶಾಲಾ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಮರಗೋಳ ವರ್ತಕರಿಗೆ ಗೌರವ ಸಮರ್ಪಣೆ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಪ್ರತಿ ನಿತ್ಯ ನಡೆಯುವ ಅನ್ನಸಂತರ್ಪಣೆಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಮರಗೋಳ ಇಲ್ಲಿಯ ವರ್ತಕರು ಆಲೂಗಡ್ಡೆ ಹಾಗೂ ಉಳ್ಳಾಗಡ್ಡೆಯನ್ನು ಉಚಿತವಾಗಿ ಶ್ರೀಮಠಕ್ಕೆ ದೇಣಿಗೆಯನ್ನು ಸಲ್ಲಿಸುತ್ತಾ ಬರುತ್ತಿದ್ದಾರೆ. ಇಂತಹ ದಾನಿಗಳನ್ನು ಶ್ರೀಮಠಕ್ಕೆ ಆವ್ಹಾನಿಸಿ ದಿನಾಂಕ:-16.11.2025 ರಂದು ಗೌರವಿಸಿ ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ ಕಮೀಟಿಯ ಧರ್ಮದರ್ಶಿಗಳಾದ ಶ್ರೀ ಉದಯಕುಮಾರ ಡಿ. ನಾಯ್ಕ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಸಿದ್ದನಗೌಡ ಪಿ. ಪಾಟೀಲ ಮತ್ತು ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ಡಾ|| ಅರವಿಂದ ಜತ್ತಿ ಇವರ ಭೆಟ್ಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ದಿನಾಂಕ:-15.11.2025 ರಂದು ಬಸವ ಸಮಿತಿಯ ಹಿರಿಯ ಅದ್ಯಕ್ಷರಾದ ಸನ್ಮಾನ್ಯ ಶ್ರೀ ಡಾ|| ಅರವಿಂದ ಜತ್ತಿ ಇವರು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಉಭಯ ಶ್ರೀಗಳವರ ದರ್ಶನಾಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ಟ್ರಸ್ಟ್ ಕಮೀಟಿ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಮತ್ತು ಭಕ್ತರಾದ ಶ್ರೀ ಲೋಕೇಶ ಕೊರವಿ, ಶ್ರೀ ಜೆ.ಎಲ್.ವಿಶ್ವನಾಥ, ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು




  VIEW ALL