ಜ್ಞಾನ ದಾಸೋಹ, ಅನ್ನದಾಸೋಹ, ನಾಮಸ್ಮರಣೆ ದಾಸೋಹ ಈ ತ್ರಿವಿಧ ದಾಸೋಹ ನಡೆಯುವ ವಿಶ್ವದ ಏಕೈಕ ಜಾತ್ಯಾತೀತ ಅವಿಮುಕ್ತ ಕ್ಷೇತ್ರ ಜಗದ್ಗುರು ಶ್ರೀ ಸಿದ್ಧಾರೂಢರ ಮಠ – ಪೂಜ್ಯ ಸಹಜಾನಂದ ಶ್ರೀಗಳು
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠದಲ್ಲಿ 16.07.2026 ರಿಂದ 10.08.2026 ರವರೆಗೆ 18ನೇ ವರ್ಷದ ಆರೂಢ ತತ್ವಚಿಂತನ ಸಾಧನ ಶಿಬಿರದ ಸಮಾರೋಪ ಸಮಾರಂಭದಲ್ಲಿ ದಿವ್ಯಸಾನಿಧ್ಯವನ್ನು ಶ್ರೋ.ಬ್ರ ಸದ್ಗುರು ಸಹಜಯೋಗಿ ಶ್ರೀ ಸಹಜಾನಂದ ಮಹಾಸ್ವಾಮಿಗಳು, ಪೀಠಾಧ್ಯಕ್ಷರು, ಶ್ರೀ ಸಿದ್ಧಾರೂಢರ ದರ್ಶನ ಪೀಠ, ಚಿಕ್ಕನಂದಿ- ಮಹಾಲಿಂಗಪೂರ ಆಶೀರ್ವಚನವನ್ನು ನೀಡಿದರು, ಹುಬ್ಬಳ್ಳಿಯ ಶ್ರೀಮಠದಲ್ಲಿ ಸತತವಾಗಿ ಹದಿನೆಂಟು ವರ್ಷಗಳ ಪರಿಯಂತರವಾಗಿ ಭಗವಚ್ಚಿಂತನ ಸಾಧನ ಶಿಬಿರ ನಡೆಯಿಸಿಕೊಂಡು ಬಂದಿದ್ದು ಅತ್ಯಂತ ಶ್ಲಾö್ಯಘನೀಯವಾದ ವಿಷಯವಾಗಿದೆ, ಏಕೆಂದರೆ ಇತ್ತೀಚಿನ ದಿನಮಾನಗಳಲ್ಲಿ ಬೇರೆ ಬೇರೆ ವಿಷಯಗಳ ಚಿಂತನೆ ಮಾಡುವ ಶಿಬಿರಗಳು ಸಾಕಷ್ಟು ನಡೆಯುತ್ತವೆ, ಆದರೆ ಸರ್ವ ಜೀವಿಗಳ ಆತ್ಮ ಸ್ವರೂಪಿಯಾದ ಭಗವಂತನ ಚಿಂತನೆ ನಡೆಯುವುದು ಅತೀ ವಿರಳ, ಇಂತಹದರಲ್ಲಿ ಶ್ರೀಮಠದಿಂದ ಹದಿನೆಂಟು ವರ್ಷಗಳವರೆಗೆ ಭಗವಚ್ಚಿಂತನ ಸಾಧನ ಶಿಬಿರ ನಡೆಯಿಸಿ ಶಿಬಿರಾರ್ಥಿಗಳಿಗೆ ವಿಚಾರ ಸಾಗರ, ಪಾರಮಾರ್ಥಗೀತೆ, ಸಿದ್ಧಾರೂಢರ ಚರಿತ್ರೆ ಹಾಗೂ ಶ್ರೀಮನ್ ನಿಜಗುಣ ಸ್ವಾಮಿಗಳ ಶಾಸ್ತç ಮುಂತಾದ ಗ್ರಂಥಗಳನ್ನು ಅಧ್ಯಯನ ಮಾಡಿಕೊಳ್ಳಲಿಕ್ಕೆ ಅನುಕೂಲ ಮಾಡಿಕೊಟ್ಟ ಶ್ರೀಮಠದ ಎಲ್ಲಾ ಧರ್ಮದರ್ಶಿಗಳಿಗೆ ಸಿದ್ಧಾರೂಢರ ಕೃಪಾಶೀರ್ವಾದ ಇರಲೆಂದು ಹೃದಯ ತುಂಬಿ ಹಾರೈಸಿದರು. ಸಾನಿಧ್ಯವನ್ನು ನ್ಯಾಯ ವೇದಾಂತಾಚಾರ್ಯ ಪರಮ ಪೂಜ್ಯ ಶ್ರೀ ದಯಾನಂದ ಸರಸ್ವತಿ ಮಹಾಸ್ವಾಮಿಗಳು, ಶ್ರೀ ಪೂರ್ಣಾನಂದ ಆಶ್ರಮ, ಕಾಡರಕೊಪ್ಪ ಇವರು ವಹಿಸಿದ್ದರು ನೇತೃತ್ವವನ್ನು ಸ್ಥಾನವನ್ನು ಅಣ್ಣಿಗೇರಿ ದಾಸೋಹ ಮಠದ ಪೀಠಾಧೀಶರಾದ ಪರಮ ಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಇವರು ವಹಿಸಿದ್ದರು. ಸಮ್ಮುಖ ಸ್ಥಾನವನ್ನು ಪರಮ ಪೂಜ್ಯ ಶ್ರೀ ಸೋಮೇಶ್ವರಾನಂದ ಮಹಾಸ್ವಾಮಿಗಳು, ಸೈದಾಪುರ ಹಾಗೂ ಮಹಾಲಿಂಗಪುರ, ಪರಮ ಪೂಜ್ಯ ಶ್ರೀ ಯೋಗಿರಾಜ ಶ್ರೀ ಸದಾಶಿವ ಗುರೂಜಿ, ರನ್ನಬೆಳಗಲಿ ಹಾಗೂ ಮಾತೋಶ್ರೀ ಶಶಿಕಲಾ ಮಾತಾ ಇವರುಗಳು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸನ್ಮಾನ್ಯ ಶ್ರೀ ಡಿ.ಆರ್.ಪಾಟೀಲ, ಅಧ್ಯಕ್ಷರು, ಭಕ್ತರ ಮೇಲ್ಮನೆ ಸಭಾ ಇವರು ವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀಮಠದ ಟ್ರಸ್ಟ್ ಕಮೀಟಿಯ ಚೇರ್ಮನ್ನರಾದ ಶ್ರೀ ಬಾಳು ಟಿ. ಮಗಜಿಕೊಂಡಿ ಇವರು ವಹಿಸಿದ್ದರು. ಆರೂಢ ತತ್ತ÷್ವಚಿಂತನ ಸಾಧನ ಶಿಬಿರದ ಸಂಚಾಲಕರು ಹಾಗೂ ಶ್ರೀಮಠದ ಧರ್ಮದರ್ಶಿಗಳಾದ ಶ್ರೀ ಶಾಮಾನಂದ ಬಿ. ಪೂಜೇರಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಸರ್ವರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ವೈಸ್-ಚೇರ್ಮನ್ನರಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಧರ್ಮದರ್ಶಿಗಳಾದ ಶ್ರೀಮತಿ ಸರ್ವಮಂಗಳಾ ಎನ್. ಪಾಠಕ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಸಿದ್ದನಗೌಡ ಪಿ. ಪಾಟೀಲ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀ ರಮೇಶ ಎಸ್. ಬೆಳಗಾವಿ, ಶ್ರೀಮಠದ ಸಿಬ್ಬಂದಿ ವರ್ಗದವರು, ಶಿಬಿರಾರ್ಥಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು. ಮಾಜಿ ಧರ್ಮದರ್ಶಿಗಳಾದ ಶ್ರೀ ಎಸ್.ಆಯ್.ಕೋಳಕೂರ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.