Shri Siddharoodha Swamiji Math Trust Committee

Hubballi

www.srisiddharoodhaswamiji.in

ಸನ್ಮಾನ್ಯ ಶ್ರೀಮತಿ ಕೆ.ಜಿ.ಶಾಂತಿ ಮೇಡಂ ಇವರಿಂದ ಶ್ರೀಮಠದಲ್ಲಿ ವಿವಿಧ ಕಟ್ಟಡ ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನಾ ಸಮಾರಂಭ.
Date : 10-05-2024
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ದಿನಾಂಕ:-10.05.2024 ರಂದು ಶ್ರೀ ಸಿದ್ಧಾರೂಢ ಗೋಸೇವಾ ಕೇಂದ್ರ ಅಡಿಗಲ್ಲು ಮತ್ತು ಶ್ರೀ ಸಿದ್ಧಾರೂಢ ಅದ್ವೆತ ವೇದಾಂತ ಗ್ರಂಥಾಲಯ, ಶ್ರೀ ಸಿದ್ಧಾರೂಢ ವಸತಿ ಗೃಹ (ಡಾರಮೇಟರಿ), ಶ್ರೀ ಸಿದ್ಧಾರೂಢ ಗೋಸೇವಾ ಕೇಂದ್ರದ ಸಿಬ್ಬಂದಿಗಳ ವಸತಿ ಕೊಠಡಿ ಹಾಗೂ ಶ್ರೀ ಸಿದ್ಧಾರೂಢ ಭಕ್ತ ನಿಲಯ ಒಂದನೇ ಮಹಡಿಯ ಉದ್ಘಾಟನಾ ಸಮಾರಂಭವನ್ನು ನೆರವೇರಿಸಲಾಯಿತು, ಉದ್ಘಾಟಕರಾಗಿ ಸನ್ಮಾನ್ಯ ಶ್ರೀಮತಿ ಕೆ.ಜಿ.ಶಾಂತಿ, ಶ್ರೀಮಠದ ಮುಖ್ಯ ಆಡಳಿತಾಧಿಕಾರಿಗಳು, ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಧಾರವಾಡ. ಜಿಲ್ಲಾ ಧಾರವಾಡ ಇವರು ನೆರವೇರಿಸಿದರು, ಸನ್ಮಾನ್ಯ ಶ್ರೀ ಸಂಜಯ್ ಗುಡಗುಡಿ, ಪ್ರಧಾನ ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ. ಧಾರವಾಡ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಅಧ್ಯಕ್ಷತೆಯನ್ನು ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ ಇವರು ವಹಿಸಿದ್ದರು. ಈ ಸಂದರ್ಭದಲ್ಲಿ ವೈಸ್-ಚೇರ್‌ಮನ್ನರಾದ ಶ್ರೀ ಮಂಜುನಾಥ ಎಸ್. ಮುನವಳ್ಳಿ, ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಸರ್ವಮಂಗಳಾ ಎನ್. ಪಾಠಕ, ಧರ್ಮದರ್ಶಿಗಳಾದ ಶ್ರೀ ಶಾಮಾನಂದ ಬಾ. ಪೂಜೇರಿ, ಶ್ರೀ ಚೆನ್ನವೀರ ಡಿ. ಮುಂಗುರವಾಡಿ, ಶ್ರೀ ಬಾಳು ಟಿ. ಮಗಜಿಕೊಂಡಿ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀ ರಮೇಶ ಎಸ್. ಬೆಳಗಾವಿ, ಶ್ರೀಮತಿ ಗೀತಾ ಟಿ. ಕಲಬುರ್ಗಿ, ಶ್ರೀ ವಿನಾಯಕ ಅ. ಘೋಡ್ಕೆ, ಮತ್ತು ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ಸೋ. ತುಪ್ಪದ ಹಾಗೂ ಶ್ರೀಮಠದ ಸಿಬ್ಬಂದಿ ವರ್ಗದವರು ಮತ್ತು ಭಕ್ತರು ಉಪಸ್ಥಿತರಿದ್ದರು.