ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಿಂದ ಸನ್ಮಾನ್ಯ ಶ್ರೀ ಸತೀಶ ಲ. ಜಾರಕಿಹೊಳಿ ಇವರ ಭೆಟ್ಟಿ.
Date : 26-04-2026
ದಿನಾಂಕ:-26.04.2026 ರಂದು ಸನ್ಮಾನ್ಯ ಶ್ರೀ ಸತೀಶ ಲ. ಜಾರಕಿಹೊಳಿ, ಮಾನ್ಯ ಸಚಿವರು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು, ಬೆಳಗಾವಿ ಇವರು ಶ್ರೀಮಠದಕ್ಕೆ ಭೇಟಿ ಕೊಟ್ಟು ಉಭಯ ಶ್ರೀಗಳವರ ದರ್ಶನ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಶ್ರೀಮಠದ ಚೇರ್ಮನ್ನರಾಗಿ ಶ್ರೀ ಬಾಳು ಟಿ. ಮಗಜಿಕೊಂಡಿ ಇವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ವೈಸ್-ಚೇರ್ಮನ್ನರಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಧರ್ಮದರ್ಶಿಗಳಾದ ಶ್ರೀ ಶಾಮಾನಂದ ಬಾ. ಪೂಜೇರಿ, ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ಶ್ರೀ ಉದಯಕುಮಾರ ಡಿ. ನಾಯಕ ಹಾಗೂ ಶ್ರೀಮಠದ ಸಿಬ್ಬಂದಿಗಳು ಮತ್ತು ಭಕ್ತರು ಉಪಸ್ಥಿತರಿದ್ದರು