Shri Siddharoodha Swamiji Math Trust Committee

Hubballi

www.srisiddharoodhaswamiji.in

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಎಸ್.ಬಿ.ಐ.ಪ್ರಧಾನ ವ್ಯವಸ್ಥಾಪಕರ ಭೆಟ್ಟಿ
Date : 05-08-2026
ದಿನಾಂಕ:-05.08.2026 ರಂದು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಸಂಜಯ್‌ಕುಮಾರ ಝಾ, ಉಪ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಮಣಿಕಂಡನ್ ರಾಮಕೃಷ್ಣನ್, ಪ್ರಾದೇಶಿಕ ವ್ಯವಸ್ಥಾಪಕರಾದ ಶ್ರೀ ನಾಗಸುಬ್ಬಾರೆಡ್ಡಿ ಬಿ. ಇವರುಗಳು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಉಭಯ ಶ್ರೀಗಳವರ ದರ್ಶನಾಶೀರ್ವಾದ ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸಿದ್ಧಾರೂಢ ನಗರ ಶಾಖೆಯ ವ್ಯವಸ್ಥಾಪಕರಾದ ಶ್ರೀ ಅಭಯ್‌ಕುಮಾರ ಇವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶ್ರೀಮಠದ ದಾಸೋಹದಲ್ಲಿ ಉಪಯೋಗಿಸಲಿಕ್ಕೆ ಬೈಲರ್, ಕುಕ್ಕರ್, ಕೋಲ್ಡ್ ಸ್ಪೋರೇಜ್ ಇವುಗಳನ್ನು ಬ್ಯಾಂಕಿನ ಸಿ.ಎಸ್.ಆರ್. ಫಂಡ್‌ನಲ್ಲಿ ಶ್ರೀಮಠಕ್ಕೆ ದೇಣಿಗೆ ಸಲ್ಲಿಸಲು ಟ್ರಸ್ಟ್ ಕಮೀಟಿ ವತಿಯಿಂದ ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಬಾಳು ಟಿ. ಮಗಜಿಕೊಂಡಿ, ಗೌರವ ಕಾರ್ಯದರ್ಶಿಗಳಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಉದಯಕುಮಾರ ಡಿ. ನಾಯ್ಕ ಮತ್ತು ಶ್ರೀಮಠದ ಸಿಬ್ಬಂದಿವರ್ಗದವರು, ಎಸ್.ಬಿ.ಐ. ಬ್ಯಾಂಕಿನ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು