Shri Siddharoodha Swamiji Math Trust Committee

Hubballi

www.srisiddharoodhaswamiji.in

Events Of Current Months

ಕೌದಿಪೂಜೆ
Date:-01.03.2025, ಕೌದಿಪೂಜೆಯೊಂದಿಗೆ ಶಿವರಾತ್ರಿ ಉತ್ಸವ ಸಮಾಪ್ತಿ
ಮಹಾಶಿವರಾತ್ರಿ ಉತ್ಸವದ ಸಪ್ತಾಹ ಆರಂಭ.
Date:-21.02.2025 ಶ್ರೀ ಸಿದ್ಧಾರೂಢಮಠದಲ್ಲಿ ಮಹಾಶಿವರಾತ್ರಿ ಉತ್ಸವದ ಸಪ್ತಾಹ ಆರಂಭ.
ಶಿವರಾತ್ರಿ ಅಮವಾಸ್ಯೆ
Date:-28.02.2025, ಶಿವರಾತ್ರಿ ಅಮವಾಸ್ಯೆ
ಮಹಾಶಿವರಾತ್ರಿ – ಜಾಗರಣೆ
Date:-26.02.2025 ಮಹಾಶಿವರಾತ್ರಿ – ಜಾಗರಣೆ
ಶ್ರೀ ಸಿದ್ಧಾರೂಢಸ್ವಾಮಿಗಳ ರಥೋತ್ಸವ
Date:-27.02.2025 ಶ್ರೀ ಸಿದ್ಧಾರೂಢಸ್ವಾಮಿಗಳ ರಥೋತ್ಸವ

Daily News
Date:-22.02.2025 ವಿಶ್ವ ವೇದಾಂತ ಪರಿಷತ್ ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯ ಸ್ವಾಮೀಜಿಗಳು ಮತ್ತು ಜ್ಞಾನರು

Date:-22.02.2025 ವಿಶ್ವ ವೇದಾಂತ ಪರಿಷತ್ ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯ ಸ್ವಾಮೀಜಿಗಳು ಮತ್ತು ಜ್ಞಾನರು

Date:-21.02.2025 ವಿಶ್ವ ವೇದಾಂತ ಪರಿಷತ್ ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯ ಸ್ವಾಮೀಜಿಗಳು ಮತ್ತು ಜ್ಞಾನರು

ವಿಶ್ವ ವೇದಾಂತ ಪರಿಷತ್ ಕಾರ್ಯಕ್ರಮದ ಉದ್ಘಾಟನೆ ಕಾರ್ಯಕ್ರಮ

ವಿಶ್ವ ವೇದಾಂತ ಪರಿಷತ್ ಕಾರ್ಯಕ್ರಮದ ಉದ್ಘಾಟನೆ ಕಾರ್ಯಕ್ರಮ

Date:-20.02.2025 ವಿಶ್ವ ವೇದಾಂತ ಪರಿಷತ್ ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯ ಸ್ವಾಮೀಜಿಗಳು ಮತ್ತು ಜ್ಞಾನರು

Date:-20.02.2025 ವಿಶ್ವ ವೇದಾಂತ ಪರಿಷತ್ ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯ ಸ್ವಾಮೀಜಿಗಳು ಮತ್ತು ಜ್ಞಾನರು

ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳ ಆರೂಢ ಜ್ಯೋತಿ ಯಾತ್ರೆಯ ಮೆರವಣಿಗೆ ಕಾರ್ಯಕ್ರಮ...

ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳ ಆರೂಢ ಜ್ಯೋತಿ ಯಾತ್ರೆಯ ಮೆರವಣಿಗೆ ಕಾರ್ಯಕ್ರಮ...

ಜಗದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳವರ ಜ್ಯೋತಿ ರಥ ಯಾತ್ರೆಯ ಉದ್ಘಾಟನೆ.

ಹುಬ್ಬಳ್ಳಿಯ ಜಗದ್ಗುರು ಶ್ರೀ ಸಿದ್ಧಾರೂಢರ 190 ನೇ ಜಯಂತ್ಯುತ್ಸವ ಹಾಗೂ ಜಗದ್ಗುರು ಶ್ರೀ ಗುರುನಾಥಾರೂಢರ 115 ನೇ ಜಯಂತ್ಯುತ್ಸವ, ಶ್ರೀ ಸಿದ್ಧಾರೂಢರ ಕಥಾಮೃತದ ಶತಮಾನೋತ್ಸವ ನಿಮಿತ್ಯ ಆರೂಢ ಜ್ಯೋತಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ಸದರ ಜ್ಯೋತಿ ಯಾತ್ರೆಯ ಉದ್ಘಾನೆಯನ್ನು ದಿನಾಂಕ:-23.12.2024 ರಂದು ಶ್ರೀ ಸಿದ್ಧಾರೂಢರ ಜನ್ಮ ಸ್ಥಳವಾದ ಬೀದರ ಜಿಲ್ಲೆಯ ಚಳಕಾಪೂರದಲ್ಲಿ ಅತ್ಯಂತ ವೈಭವದಿಂದ ನೆರವೇರಿಸಲಾಯಿತು. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೋ.ಬ್ರ. ಸದ್ಗುರು ಡಾ|| ಶಿವಕುಮಾರ ಮಹಾಸ್ವಾಮಿಗಳು, ಚಿದಂಬರಾಶ್ರಮ ಶ್ರೀ ಸಿದ್ಧಾರೂಢ ಮಠ ಬೀದರ ಹಾಗೂ ಚಳಕಾಪುರ ಇವರು ವಹಿಸಿದ್ದರು, ನೇತೃತ್ವವನ್ನು ಶ್ರೋ.ಬ್ರ. ಸದ್ಗುರು ಶ್ರೀ ಪ್ರಣವಾನಂದ ಮಹಾಸ್ವಾಮಿಗಳು, ಶ್ರೀನಾಗಭೂಷಣ ಶಿವಯೋಗಿ ಮಠ, ಮುಚಳಂಬ ಇವರು ವಹಿಸಿದ್ದರು, ಉದ್ಘಾಟನೆಯನ್ನು ಸನ್ಮಾನ್ಯ ಶ್ರೀ ಕೆ. ನಟರಾಜನ್, ಗೌರವಾನ್ವಿತ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇವರು ನೆರವೇರಿಸಿ ಮಾತನಾಡುತ್ತಾ ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳು ಜಾತಿ, ಮತ, ಪಂಥ ಎನ್ನದೇ ಎಲ್ಲರನ್ನೂ ತಮ್ಮವರೆಂದು ಅಪ್ಪಿಕೊಂಡಿದ್ದರು. ಹೀಗಾಗಿ ಅವರು ಸರ್ವಧರ್ಮದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ ಅಂತ ನುಡಿದರು. ಅಧ್ಯಕ್ಷತೆಯನ್ನು ಸನ್ಮಾನ್ಯ ರುದ್ರಪ್ಪ ಲಮಾಣಿ, ಉಪಸಭಾಪತಿಗಳು, ಕರ್ನಾಟಕ ವಿಧಾನ ಸಭೆ ಬೆಂಗಳೂರು ಇವರು ಶ್ರೀಮಠದ ಕ್ಯಾಲೆಂಡರ್ ಹಾಗೂ ಡೈರಿಗಳನ್ನು ಬಿಡುಗಡೆ ಮಾಡಿದರು. ಸಮ್ಮುಖ ಸ್ಥಾನದಲ್ಲಿ ಮಾತೋಶ್ರೀ ಲಕ್ಷ್ಮಿ ತಾಯಿಯವರು, ಸಿದ್ಧಾರೂಢ ಮಠ, ಗುಲ್ಬುರ್ಗಾ, ಪರಮ ಪೂಜ್ಯ ಶ್ರೀ ಶಂಕರಾನಂದ ಮಹಾಸ್ವಾಮಿಗಳು, ಸಿದ್ಧಾರೂಢ ಮಠ, ಚಳಕಾಪುರ. ಪರಮ ಪೂಜ್ಯ ಶ್ರೀ ಗಣೇಶಾನಂದ ಮಹಾಸ್ವಾಮಿಗಳು, ಸಿದ್ಧಾರೂಢ ಮಠ, ಬೀದರ, ಪರಮ ಪೂಜ್ಯ ಶ್ರೀ ಪರಮಾನಂದ ಮಹಾಸ್ವಾಮಿಗಳು, ಸಿದ್ಧಾರೂಢ ಮಠ, ಯಳಸಂಗಿ, ಪರಮ ಪೂಜ್ಯ ಶ್ರೀ ಸದ್ರೂಪಾನಂದ ಮಹಾಸ್ವಾಮಿಗಳು, ಮಳಚಾಪೂರ, ಮಾತೋಶ್ರೀ ಅಮೃತಾನಂದಮಯಿ ತಾಯಿಯವರು, ಶ್ರೀ ಸಿದ್ಧಾರೂಢ ಮಠ, ಬೆಳ್ಳೂರ, ಪರಮ ಪೂಜ್ಯ ಶ್ರೀ ನಾಗಯ್ಯ ಸ್ವಾಮಿಗಳು, ಶ್ರೀ ಸಿದ್ಧಾರೂಢ ಮಠ, ಬ್ಯಾಲಳ್ಳಿ ಇವರುಗಳು ವಹಿಸಿದ್ದರು. ಈ ಸಂದರ್ಭದಲ್ಲಿ ಶ್ರೀ ಡಿ.ಆರ್.ಪಾಟೀಲ, ಅಧ್ಯಕ್ಷರು, ಮೇಲ್ಮನೆ ಸಭಾ, ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ವೈಸ್-ಚೇರ್‌ಮನ್ನರಾದ ಶ್ರೀ ಮಂಜುನಾಥ ಎಸ್. ಮುನವಳ್ಳಿ, ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಸರ್ವಮಂಗಳಾ ಎನ್. ಪಾಠಕ ಧರ್ಮದರ್ಶಿಗಳಾದ ಶ್ರೀ ಶಾಮಾನಂದ ಬಾ. ಪೂಜೇರಿ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಚನ್ನವೀರ ಡಿ. ಮುಂಗುರವಾಡಿ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀ ಅಂದಾನಪ್ಪ ಚ. ಚಾಕಲಬ್ಬಿ, ಶ್ರೀ ವಸಂತ ಯ. ಸಾಲಗಟ್ಟಿ, ಶ್ರೀಮತಿ ಗೀತಾ ಟಿ. ಕಲಬುರ್ಗಿ ಹಾಗೂ ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಭಕ್ತವೃಂದದವರು ಉಪಸ್ಥಿತರಿದ್ದರು.

ಜಗದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳವರ ಜ್ಯೋತಿ ರಥ ಯಾತ್ರೆ ಉದ್ಘಾಟನಾ ಸಮಾರಂಭ

ಹುಬ್ಬಳ್ಳಿಯ ಜಗದ್ಗುರು ಶ್ರೀ ಸಿದ್ಧಾರೂಢರ 190 ನೇ ಜಯಂತ್ಯುತ್ಸವ ಹಾಗೂ ಜಗದ್ಗುರು ಶ್ರೀ ಗುರುನಾಥಾರೂಢರ 115 ನೇ ಜಯಂತ್ಯುತ್ಸವ, ಶ್ರೀ ಸಿದ್ಧಾರೂಢರ ಕಥಾಮೃತದ ಶತಮಾನೋತ್ಸವ ನಿಮಿತ್ಯ ಆರೂಢ ಜ್ಯೋತಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಜ್ಯೋತಿ ಯಾತ್ರೆಯು ದಿನಾಂಕ:-23.12.2024 ರಂದು ಶ್ರೀ ಸಿದ್ಧಾರೂಢರ ಜನ್ಮ ಸ್ಥಳವಾದ ಚಳಕಾಪೂರ ಬೀದರ ಜಿಲ್ಲೆಯಿಂದ ಹೊರಟು ಕರ್ನಾಟಕ, ಆಂದ್ರ, ಮಹಾರಾಷ್ಟç ಹಾಗೂ ಗೋವಾ ರಾಜ್ಯಗಳ ವಿವಿಧ ಮಠ ಹಾಗೂ ವಿವಿಧ ಸ್ಥಳಗಳಲ್ಲಿ ಸಂಚರಿಸಿ ದಿನಾಂಕ:-18.02.2025 ರಂದು ಶ್ರೀ ಸಿದ್ಧಾರೂಢ ಮಠ ಹುಬ್ಬಳ್ಳಿಗೆ ಬಂದು ತಲುಪಲಿದೆ ಎಲ್ಲಾ ಜಿಲ್ಲೆಗಳಲ್ಲಿಯೂ ಸಂಚರಿಸುವ ಸಂದರ್ಭದಲ್ಲಿ ಶ್ರೀ ಸಿದ್ಧಾರೂಢರ ತತ್ವಗಳ ಭಜನೆ ಹಾಗೂ ಪ್ರವಚನಗಳ ಮೂಲಕ ಜ್ಞಾನದ ಪ್ರಸಾರ ಮತ್ತು ವಿಶ್ವಶಾಂತಿ ಮತ್ತು ಲೋಕಕಲ್ಯಾಣಾರ್ಥವಾಗಿ ಮಾಡುತ್ತಿರುವುದು.

ಲಕ್ಷದೀಪೋತ್ಸವ ಕಾರ್ಯಕ್ರಮ

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ದಿನಾಂಕ: 01.12.2024 ರಂದು ಸಾಯಂಕಾಲ 6-೦೦ ಘಂಟೆಗೆ ಲಕ್ಷದೀಪೋತ್ಸವ ಕಾರ್ಯಕ್ರಮವು ಭಕ್ತರ ಸಹಯೋಗದೊಂದಿಗೆ ಅತೀ ವಿಜೃಂಭಣೆಯಿAದ ಜರುಗಿತು.




  VIEW ALL